ಬೆಂಗಳೂರು : ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ನಾಳೆಯಿಂದ ಮಾಲ್, ಥಿಯಟರ್, ಕಾಲೇಜುಗಳು ಬಂದ್ ಮಾಡುವಂತೆ ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಳೆಯಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಮಾಲ್, ಥಿಯಟರ್, ಕಾಲೇಜು ಬಂದ್ ಮಾಡಲಾಗುವುದು ಹಾಗೂ ರಾಜ್ಯದಲ್ಲಿ ಮದುವೆ, ಜಾತ್ರೆ, ಎಲ್ಲ ರೀತಿಯ ಸಾರ್ವಜನಿಕ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಕಾಲೇಜುಗಳಲ್ಲಿ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಿದ್ದಾರೆ.
Comment here