ತುಮಕೂರು ಲೈವ್

ತುಮಕೂರಿನಲ್ಲಿ ಸಂಭಾವ್ಯ ಕೋವಿಡ್ ಮೂರನೇ ಅಲೆಗೆ ಸಜ್ಜು: ಸಭೆ

public story


Tumkuru: ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ‌ ಮುಂಜಾಗ್ರತಾ ಕ್ರಮವಾಗಿ‌ ಜಿಲ್ಲೆಗಳಲ್ಲಿ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ‌ಹಿರಿಯ‌ ನಾಗರಿಕರ ಸಬಲೀಕರಣ ಇಲಾಖಾ ಸಚಿವರಾ ಶಶಿಕಲಾ ಜೊಲ್ಲೆ ತಿಳಿಸಿದರು.

ಜಿಲ್ಲಾ ಪಂಚಾಯತ್ ನಲ್ಲಿ‌ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾದಿಂದ
ರಾಜ್ಯದಲ್ಲಿ ಸುಮಾರು 43 ಮಕ್ಕಳು ಪಾಲಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆಯಡಿ ಇಂತಹ ಮಕ್ಕಳಿಗೆ ಪ್ರತಿ ತಿಂಗಳು 3500 ಸಾವಿರ ರೂ. ಗಳನ್ನು ನೀಡಲಾಗುವುದು. ಅಲ್ಲದೇ ಅನಾಥ ಹೆಣ್ಣುಮಕ್ಕಳ ಭವಿಷ್ಯದ ದೃಷ್ಠಿಯಿಂದ 23 ವರ್ಷ ತುಂಬಿದ ಬಳಿಕ 1 ಲಕ್ಷ ರೂ.‌ನೀಡಲಾಗುವುದು ಎಂದು ಹೇಳಿದರು.

ಸರ್ಕಾರ ರೂಪಿಸಿರುವ ಈ ಯೋಜನಾ ಸೌಲಭ್ಯಗಳನ್ನು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತಲುಪಿಸಿ ಅವರಿಗೆ ನೆರವಾಗಬೇಕು ಎಂದು ಹೇಳಿದರು.

ಜಿಲ್ಲಾಡಳಿತದಿಂದ ಸಕಲ ರೀತಿಯಲ್ಲಿಯೂ ಮೂರನೇ ಅಲೆ ಎದುರಿಸಲು ಸಜ್ಜು‌ ಮಾಡಿಕೊಳ್ಳಲಾಗಿದೆ. ಅಪೌಷ್ಟಿಕತೆಯುಳ್ಳ ಮುಕ್ಕಳಿಗೆ ಸೂಕ್ಷ್ಮ ಪೋಷಕಾಂಶವುಳ್ಳ ವಿಶೇಷ ಆಹಾರ ಕಿಟ್ ನೀಡುವ ಕಾರ್ಯಕ್ಕೆ ಮುಂದಾಗಿರುವ ಕ್ರಮ ಶ್ಲಾಘನೀಯವಾಗಿದೆ. ಅದೇ ರೀತಿ ಪೋಷಕರಿಗೆ ಹೆಚ್ಚು ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಮಕ್ಕಳನ್ನು ಮತ್ತು ತಾಯಿಯ ಜೊತೆಗೆ ಆರೈಕೆ ಮಾಡಲು ಜಿಲ್ಲಾಡಳಿತ ಕೋವಿಡ್ ಕೇರ್‌ ಸೆಂಟರ್ ಗಳನ್ನು ಗುರುತಿಸಿ ಸಜ್ಜುಗೊಳಿಸಿದೆ‌ ಎಂದು ಮಾಹಿತಿ‌ ನೀಡಿದರು.

Comment here