Public story
ತುಮಕೂರು: ಕೋವಿಡ್ ಸಂದರ್ಭದಲ್ಲಿ ದೇಶದಾದ್ಯಂತ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇಂದು ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ವೈದ್ಯರ ಮೇಲಾಗುತ್ತಿರುವ ಹಲ್ಲೆಯನ್ನು ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ, ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಡಾ.ಸನತ್ ಕುಮಾರ್, ಡಾ. ಬಸವರಾಜು, ಡಾ. ತ್ಯಾಗರಾಜ್, ಡಾ.ಭೂಷಣ್, ಡಾ.ಲಕ್ಷ್ಮಿಕಾಂತ್, ಡಾ.ಸತ್ಯನಾರಾಯಣ, ಡಾ. ಮೋಹನ್, ಡಾ. ಸಂಜಯ್, ಡಾ.ನರಸಿಂಹಮೂರ್ತಿ,
ಮತ್ತಿತರರಿದ್ದರು.
Comment here