Thursday, March 28, 2024
Google search engine
Homeಜಸ್ಟ್ ನ್ಯೂಸ್ನಿದ್ದೆಗೆಡಿಸುವ ಆತಂಕಕಾರಿ ದಿನಗಳನ್ನು ಒದ್ದೋಡಿಸಬೇಕು – ಚಿಂತಕ ಕೆ.ದೊರೈರಾಜ್

ನಿದ್ದೆಗೆಡಿಸುವ ಆತಂಕಕಾರಿ ದಿನಗಳನ್ನು ಒದ್ದೋಡಿಸಬೇಕು – ಚಿಂತಕ ಕೆ.ದೊರೈರಾಜ್

ಪ್ರಸಕ್ತ ದೇಶದ ಸ್ಥಿತಿಯಲ್ಲಿ ಜನಸಾಮಾನ್ಯರ ನಿದ್ದೆಗೆಡಿಸುವ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದ್ದು ಇದನ್ನು ಒದ್ದೋಡಿಸಲು ಜನಪರ, ಜೀವಪರ ಚಳವಳಿಗಳು ಒಂದುಗೂಡಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಜನಪರ ಚಿಂತಕ ಕೆ.ದೊರೈರಾಜ್ ತಿಳಿಸಿದರು.
ತುಮಕೂರಿನ ಗಾಂಧೀನಗರಲದಲಿರುವ ಜನಚಳವಳಿ ಕೇಂದ್ರದಲ್ಲಿ ಅಕ್ಟೋಬರ್ 20ರಂದು ಹಮ್ಮಿಕೊಂಡಿದ್ದ ಸಿಐಟಿಯುನ 14ನೇ ರಾಜ್ಯ ಸಮ್ಮೇಳನದ ಸಿದ್ಧತೆ ಭಾಗವಾಗಿ ಸ್ವಾಗತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಚಳವಳಿಗಳು ಜನಸಾಮಾನ್ಯರ ನಡುವೆ ತಾತ್ವಿಕ ಹಾಗೂ ಬೌದ್ಧಿಕ ವಿಚಾರಗಳನ್ನು ವ್ಯಾಪಕವಾಗಿ ಕೊಂಡು ಹೋಗುವ ಮೂಲಕ ಬಲಿಷ್ಟ ಚಳವಳಿಗಳನ್ನು ಕಟ್ಟಬೇಕಾದ ಅಗತ್ಯವಿದೆ ಎಂದರು.
ಇತ್ತೀಚೆಗೆ ಬಂಟಿಂಗ್ ತೆರವುಗೊಳಿಸಲು ಸಂದರ್ಭದಲ್ಲಿ ಸಾವನ್ನಪ್ಪಿದ ವಿಚಾರವನ್ನು ಪ್ರಸ್ತಾಪಿಸಿದ ಅವರು, ವ್ಯವಸ್ಥೆಯಿಂದಾದ ಸಾವಿಗೆ ಸತ್ತ ಪೌರಕಾರ್ಮಿಕನನ್ನೇ ಹೊಣೆಯಾಗಿಸುವ ಅಮಾನವೀಯ ವ್ಯವಸ್ಥೆ ಖಂಡನಾರ್ಹ ಎಂದು ಹೇಳಿದರು.
ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಉಮೇಶ್ ವಿಷಯ ಮಂಡಿಸಿದರು. ಸಿಐಟಿಯು ಅಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ದುಡಿಯುವ ಜನರ ರಕ್ಷಣೆಗಾಗಿ ನಿರಂತರವಾಗಿ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವ ಸಿಐಟಿಯು ರಾಜ್ಯ ಸಮ್ಮೇಳನದಕ್ಕೆ ಜನರು ಬೆಂಬಲಿಸಿ, ಸಹಾಯ, ಸಹಕಾರ ನೀಡುವಂತೆ ಕೋರಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲ, ಜಿಲ್ಲಾ ಖಜಾಂಚಿ ಎ.ಲೋಕೇಶ್, ಸ್ವಾಗತ ಸಮಿತಿಯ ಖಜಾಂಚಿ ಷಣ್ಮುಗಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾಂiÀರ್iದರ್ಶಿ ಗುಲ್ಜಾರ್ ಬಾನು, ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ್, ಬೀಡಿ ಕಾರ್ಮಿಕರ ಸಂಘದ ನಿಸಾರ್ ಅಹಮದ್ ಶಿರಾ, ಕಟ್ಟಡ ಕಾರ್ಮಿಕರ ಸಂಘಟನೆಯ ಟಿ.ಎಂ.ಗೋವಿಂದರಾಜು, ಪೌರ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮಾತನಾಡಿದರು.
ಇದೇ ವೇಳೆ ಇತ್ತೀಚೆಗೆ ನಿಧನರಾದ ಸಿಐಟಿಯು ಹಿರಿಯ ಮುಖಂಡ ಕೋದಂಡರಾಮ್ ಹಾಗೂ ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಅವರಿಗೆ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?