Thursday, March 28, 2024
Google search engine
Homeತುಮಕೂರು ಲೈವ್ಪಾವಗಡ: ಅತಿಥಿ ಉಪನ್ಯಾಸಕರ ಪ್ರತಿಭಟನೆ

ಪಾವಗಡ: ಅತಿಥಿ ಉಪನ್ಯಾಸಕರ ಪ್ರತಿಭಟನೆ

Publicstory


ಪಾವಗಡ: ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಶ್ರೀಮತಿ ವೈ ಇ ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಸರ್ಕಾರ ವರ್ಷದಲ್ಲಿ 7 ರಿಂದ 8 ತಿಂಗಳು ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡು 11 ಸಾವಿರದಿಂದ 13 ಸಾವಿರ ರೂ ವೇತನ ನೀಡುತ್ತಿದೆ. ವೇತನವನ್ನು ಕಾಲ ಕಾಲಕ್ಕೆ ನೀಡದೆ ತಮಗೆ ತೋಚಿದಂತೆ ಯಾವಾಗಲೊ ನೀಡಲಾಗುತ್ತಿದೆ. ಇದರಿಂದ ಅತಿಥಿ ಉಪನ್ಯಾಸಕರಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ಪರೀಕ್ಷೆ, ಮೌಲ್ಯಮಾಪನ, ಪಠ್ಯ, ಪಠ್ಯೇತರ ಚಟುವಟಕೆಗಳಿಗೂ ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ಕನಿಷ್ಠ ವೇತನ, ಸೇವಾ ಭದ್ರತೆ ಕಲ್ಪಿಸದೆ ಅನ್ಯಾಯವೆಸಗಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದ ಕಾರಣ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಸೇರಿದಂತೆ ಜೀವನ ನಡೆಸಲೂ ಕಷ್ಟ ಪಡುವ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅಳಲನ್ನು ತೋಡಿಕೊಂಡರು.

ಹಲ ಬಾರಿ ಸರ್ಕಾರಕ್ಕೆ ಕನಿಷ್ಠ ವೇತನ ನೀಡಿ ಸೇವಾ ಭದ್ರತೆ ಕಲ್ಪಿಸುವಂತೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ರಾಜ್ಯ ಸಮಿತಿಯ ಕರೆಯ ಮೇರೆಗೆ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ತರಗತಿ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ವರ್ಷವಿಡೀ ವೇತನ ನೀಡಬೇಕು, ವೇತನ ಪರಿಷ್ಕರಿಸಬೇಕು, ಸೇವಾ ಭದ್ರತೆ ಕಲ್ಪಿಸಬೇಕು. ಕಾಲ ಕಾಲಕ್ಕೆ ವೇತನ ನೀಡಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಂಶುಪಾಲ ಡಾ. ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರಾದ ಶ್ರೀನಿವಾಸ್, ಮಲ್ಲಯ್ಯ, ಓಬಳೇಶಪ್ಪ, ಶಂಕರನಾಯ್ಕ, ವಿಜಯಸಿಂಹ, ಅಂಜಿನಪ್ಪ, ಶಿವಕುಮಾರ್, ಪ್ರಿಯಾಂಕ, ಶೋಭ, ಪುಷ್ಪ ಉಪಸ್ಥಿತರಿದ್ದರು.

ಪಾವಗಡದ ಶ್ರೀಮತಿ ವೈ ಇ ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರಾಂಶುಪಾಲ ಡಾ. ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರಾದ ಶ್ರೀನಿವಾಸ್, ಮಲ್ಲಯ್ಯ, ಓಬಳೇಶಪ್ಪ, ಶಂಕರನಾಯ್ಕ, ವಿಜಯಸಿಂಹ, ಅಂಜಿನಪ್ಪ, ಶಿವಕುಮಾರ್, ಪ್ರಿಯಾಂಕ, ಶೋಭ, ಪುಷ್ಪ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?