Thursday, March 28, 2024
Google search engine
Homeತುಮಕೂರು ಲೈವ್ಜನ್ರು ಮೊದ್ಲು, ನಂತ್ರ ಎಲ್ರೂ: ಹೀಗೇಕೆಂದರು ಶಾಸಕ ಸುರೇಶಗೌಡರು

ಜನ್ರು ಮೊದ್ಲು, ನಂತ್ರ ಎಲ್ರೂ: ಹೀಗೇಕೆಂದರು ಶಾಸಕ ಸುರೇಶಗೌಡರು

ಜನಪರ ಸಮಸ್ಯೆಗಳಿಗೆ ಮಿಡಿಯುವಲ್ಲಿ ಹೆಸರಾಗಿರುವ ಗ್ರಾಮಾಂತರ ಶಾಸಕ ಬಿ.ಸುರೇಶಗೌಡರು ತಮ್ಮ ಮೊದಲ ಅಧಿಕಾರಿಗಳ ಸಭೆಯಲ್ಲಿ ಕುಡಿಯುವ ನೀರಿನ ಕುರಿತು ಕ್ಲಾಸ್ ತೆಗೆದುಕೊಂಡರು.

ಜನರು ಮೊದಲು, ನಂತರ ಎಲ್ಲರೂ ಎಂದ ಅವರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಗ್ರಾಮದ ಪ್ರತಿ ಮನೆಗೂ ನಲ್ಲಿ ನೀರು ಹೋಗುವಂತಾಗಬೇಕು. ಕೆಟ್ಟು ನಿಂತಿರುವ ಪೈಪ್ ಲೈನ್ ಕೂಡಲೇ ಸರಿಪಡಿಸಬೇಕು ಎಂದರು.

ಸುದ್ದಿ ಪೂರಾ ಓದಿ

ತುಮಕೂರು:ಮುಂದಿನ ಒಂದು ತಿಂಗಳಲ್ಲಿ ನೆನೆಗುದಿಗೆ ಬಿದ್ದಿರುವ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಾದ ಬಹುಗ್ರಾಮ ಕುಡಿಯುವ ನೀರು ಯೋಜನೆ,ಜೆ.ಜೆ.ಎಂ ಮತ್ತು ಶುದ್ದ ಕುಡಿಯುವ ನೀರಿನ ಘಟಕಗಳು ಸಶಕ್ತವಾಗಿ ಕೆಲಸ ಮಾಡುವಂತೆ ಅಗತ್ಯ ಕ್ರಮವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ತೆಗೆದುಕೊಳ್ಳದೆ ಹೋದರೆ ಅವರ ವಿರುದ್ದ ಸರಕಾರಕ್ಕೆ ಪತ್ರ ಬರೆಯುವುದಾಗಿ ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಎಚ್ಚರಿಕೆ ನೀಡಿದ್ದಾರೆ.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳ ಸಭೆ ನಡೆಸಿದ ಅವರು,ನೂರಾರು ಕೋಟಿ ರೂಗಳ ಅನುದಾನದಲ್ಲಿ ನಿರ್ಮಾಣವಾದ ಎಂ.ವಿ.ಎಸ್. ಆರ್.ಓ ಪ್ಲಾಂಟ್ ಮತ್ತು ಜೆಜೆಎಂ ಯೋಜನೆಗಳು ಜನರ ಉಪಯೋಗಕ್ಕೆ ಬರುತ್ತಿಲ್ಲ.ಕಳೆದ ಐದು ವರ್ಷದಲ್ಲಿ ಇಡೀ ಯೋಜನೆಯನ್ನೇ ಸಾಯಿಸಲಾಗಿದೆ ಎಂದು ಸಿಡಿಮಿಡಿಗೊಂಡರು.

ಅಧಿಕಾರಿಗಳು ಒಂದು ತಿಂಗಳಲ್ಲಿ ಇದನ್ನು ಸರಿದಾರಿಗೆ ತರದಿದ್ದರೆ ಅವರ ವಿರುದ್ದ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಸಚಿವರುಗಳಿಗೆ ಪತ್ರ ಬರೆಯಲಾಗುವುದು.ಅಲ್ಲದೆ ತಾಲೂಕು ಕೆ.ಡಿ.ಪಿ,ಜಿಲ್ಲಾ ಕೆಡಿಪಿಸಭೆಗಳಲ್ಲದೆ, ವಿಧಾನಸಭೆ ಯಲ್ಲಿಯೂ ಇದರ ಬಗ್ಗೆ ದ್ವನಿ ಎತ್ತಲಾಗುವುದು ಎಂದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 11 ಬಹುಗ್ರಾಮ ಕುಡಿಯುವ ನೀರಿನ ಯೋಜನೆ,119 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಮಾಡಲಾಗಿದೆ. ಇದರಲ್ಲಿ ಶೇ50 ರಷ್ಟು ಕೆಲಸ ಮಾಡುತ್ತಿಲ್ಲ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಕೆರೆಗಳಿಗೆ ತುಂಬಿಸಿರುವ ನದಿ ನೀರನ್ನು ಶುದ್ದೀಕರಣ ಮಾಡಿ, ಮನೆಗಳಿಗೆ ಒದಗಿಸಲು ಆಗುತ್ತಿಲ್ಲ ವೆಂದರೆ ಈ ಯೋಜನೆ ಇದ್ದೂ ಏನು ಪ್ರಯೋಜನ ಎಂದು ಪ್ರಶ್ನಿಸಿದ ಅವರು,ಎಂವಿಎಸ್ ಸ್ಕೀಂಗಳ ನಿರ್ವಹಣೆಗೆ ವಾರ್ಷಿಕ 40 ಲಕ್ಷ ದಿಂದ 60 ಲಕ್ಷ ರೂಗಳವರೆಗೆ ನಿರ್ವಾಹಣಾ ವೆಚ್ಚ ನೀಡಲಾಗುತ್ತಿದೆ.

ನಿರ್ವಹಣೆಯ ಗುತ್ತಿಗೆ ಪಡೆದವರು ಸರಿಯಾಗಿ ಕಾರ್ಯನಿರ್ವ ಹಿಸುತ್ತಿಲ್ಲವೆಂದರೆ ಅವರಿಗೆ ನೊಟೀಷ್ ನೀಡಿ,ಸ್ಪಂದಿಸದಿದ್ದರೆ ಬ್ಲಾಕ್ ಲೀಸ್ಟ್ಗೆ ಸೇರಿಸಿ,ಅದನ್ನು ಬಿಟ್ಟು,ಗುತ್ತಿಗೆದಾರರ ಮೇಲೆ ಅಧಿಕಾರಿಗಳು,ಗ್ರಾಮಪಂಚಾಯಿತಿಗಳ ಮೇಲೆ ಗುತ್ತಿಗೆದಾರರು ನೆಪ ಹೇಳಿ ಯೋಜನೆಯನ್ನು ಹಾಳುಗೆಡವಬಾರದು ಎಂದು ಶಾಸಕ ಸುರೇಶಗೌಡ ಎಚ್ಚರಿಕೆ ನೀಡಿದರು.


ಕ್ಷೇತ್ರದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಶುದ್ದ ಕುಡಿಯುವ ನೀರಿನ ಯೋಜನೆಗಳ ಸ್ಥಿತಿಗತಿ ಅರಿಯಲು ಮೇ.28 ರ ಭಾನುವಾರ ಇಡೀ ಕ್ಷೇತ್ರದಾದ್ಯಂತ ಪ್ರವಾಸ ಮಾಡಲಿದ್ದೇನೆ.ಅಂದು ಅಧಿಕಾರಿಗಳು, ಸಂಬಂಧಪಟ್ಟ ಗ್ರಾಮಪಂಚಾಯಿತಿಗಳ ಅಧ್ಯಕ್ಷರು,ಕಾರ್ಯದರ್ಶಿಗಳು ಇದ್ದು ಸಮಸ್ಯೆಗಳ ಪಟ್ಟಿ ನೀಡಿದರೆ,ಪರಿಹಾರ ರೂಪಿಸಲು ಸಾಧ್ಯವಾಗುತ್ತದೆ. ಹಾಗಾಗಿ ಮೇ.28 ರ ಭಾನುವಾರ ಎಲ್ಲಾ ಆರ್. ಡಬ್ಲ್ಯೂ.ಎಸ್‌ ನ ಎಲ್ಲಾ ಅಧಿಕಾರಿಗಳು ಮತ್ತು ಆಯಾಯ ಗ್ರಾಮಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಆಗಮಿಸುವಂತೆ ಸಲಹೆ ನೀಡಿದರು.


ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಜೆ.ಜೆ.ಎಂ(ಜಲಜೀವನ್ ಮೀಷನ್) ಅಡಿಯಲ್ಲಿ ಸುಮಾರು 200 ಕೋಟಿ ರೂಗಳಿಗೂ ಹೆಚ್ಚಿನ ಅನುದಾನ ಬಂದಿದೆ. ಅಧಿಕಾರಿಗಳೇ ತಿಳಿಸಿರುವಂತೆ ಸುಮಾರು 384 ಕಾಮಗಾರಿಗಳ ಅಂದಾಜು ಮಾಡಿದ್ದು,ಇವುಗಳಲ್ಲಿ ಮೊದಲ ಹಂತದಲ್ಲಿ 43,ಎರಡನೇ ಹಂತದಲ್ಲಿ 44 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇವುಗಳಲ್ಲಿ ಬಹುತೇಕ ಪೂರ್ಣಗೊಂಡಿವೆ.ಮೂರನೇ ಹಂತದಲ್ಲಿ 149 ಕಾಮಗಾರಿಗಳಿದ್ದು,ಅವುಗಳನ್ನು ಶೀಘ್ರವೇ ಟೆಂಡರ್ ಕರೆದು,ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ವಹಿಸುತ್ತೇನೆ.ಜೆಜೆಎಂ ಒಂದು ಅದ್ಬುತ ಯೋಜನೆಯಾಗಿದ್ದು, ಗ್ರಾಮಪಂಚಾಯಿತಿ ಸದಸ್ಯರು,ಅಧ್ಯಕ್ಷರುಗಳು ನಿರ್ಲಕ್ಷ ಮಾಡದೆ,ನಿಮ್ಮ ವ್ಯಾಪ್ತಿಯ ಎಲ್ಲಾ ಮನೆಗಳಿಗೂ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಬಿ.ಸುರೇಶಗೌಡ ತಿಳಿಸಿದರು.
ಕ್ಷೇತ್ರದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡುತ್ತಿರುವ ಕೆ.ಆರ್.ಐ.ಡಿ.ಎಲ್.,ಶ್ರೀಸಾಯಿ ಸಿರಿ ಮತ್ತು ಜಲಸಿರಿ ಏಜೆನ್ಸಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು.ಸಮರ್ಪಕವಾಗಿ ನಿರ್ವಹಣೆ ಮಾಡದ ಏಜೆನ್ಸಿ ಟೆಂಡರ್ ರದ್ದು ಪಡಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಅವರಿಗೆ ಸೂಚಿಸಿದರು.
ಜೆಜೆಎಂ ಯೋಜನೆಯಲ್ಲಿ ವೇಗವಾಗಿ ನೀರು ಬರುವುದಿಲ್ಲ ಎಂಬ ದೂರು ಇದೆ. ಇದಕ್ಕೆ ಪರಿಹಾರವೆಂಬಂತೆ ಮೈದಾಳ ಗ್ರಾಮದಲ್ಲಿ ಪ್ರಯೋಗಿಕವಾಗಿ ಎಲ್ಲಾ ಮನೆಗಳಿಗೂ ತಲಾ ಒಂದು ಟ್ಯಾಂಕ್ ವಿತರಿಸಿ, ನೀರು ಬಂದಾಗ ಅದರಲ್ಲಿ ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ.ಇದೇ ರೀತಿಯಲ್ಲಿಯೇ ಎಲ್ಲಾ ಗ್ರಾಮಗಳಿಗೂ ಮಾಡಿದರೆ ಹೆಚ್ಚು ಅನುಕೂಲವಾಗಬಹುದು ಎಂದು ಶಾಸಕ ಬಿ.ಸುರೇಶಗೌಡ ಸಲಹೆ ನೀಡಿದರು.


ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ರವೀಶ್,ಎಇಇ ಅಶೋಕ, ಬಿ.ಇ.ಓ ಡಾ.ಹನುಮಾನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?