Thursday, March 28, 2024
Google search engine
Homegovernanceಹೈಕೋರ್ಟ್‌ಗೆ ಸುಳ್ಳು ವರದಿ - ಪಾಲಿಕೆ ವಿರುದ್ಧ ಆಕ್ಷೇಪಣೆ ಸಲ್ಲಿಕೆ

ಹೈಕೋರ್ಟ್‌ಗೆ ಸುಳ್ಳು ವರದಿ – ಪಾಲಿಕೆ ವಿರುದ್ಧ ಆಕ್ಷೇಪಣೆ ಸಲ್ಲಿಕೆ

Publicstory/prajayoga

ತುಮಕೂರು: ನಗರದಲ್ಲಿ ರಸ್ತೆ‌ ಗುಂಡಿಗಳನ್ನು ಮುಚ್ಚಿರುವುದಾಗಿ ಮಹಾನಗರ ಪಾಲಿಕೆ ಹೈಕೋರ್ಟ್ ಗೆ ಚಿತ್ರಸಹಿತ ವರದಿ ನೀಡಿದೆ. ಇದು ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ನಗರದಾದ್ಯಂತ ಸಾಕಷ್ಟು ಗುಂಡಿಗಳಿವೆ. ನಾನು ಆಧಾರಸಹಿತವಾಗಿ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸುತ್ತಿದ್ದೇನೆ ಎಂದು ವಕೀಲ ರಮೇಶ್ ನಾಯ್ಕ್ ತಿಳಿಸಿದರು.

ಹೈಕೋರ್ಟ್ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿದ್ದು, ಸಾಕ್ಷಿ ಸಮೇತ ಹೋರಾಟ ಮುಂದುವರೆಸುತ್ತೇನೆ.
2021 ನವೆಂಬರ್ ನಲ್ಲಿ ರಸ್ತೆ ಗುಂಡಿ ಮುಚ್ಚುವ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೆ. ಹೈಕೋರ್ಟ್ ನಗರಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಪಾಲಿಕೆಗೆ ನೋಟಿಸ್ ನೀಡಿ ರಸ್ತೆ ಗುಂಡಿ ಮುಚ್ಚಲು ಕ್ರಮಕೈಗೊಂಡು ವರದಿ ನೀಡುವಂತೆ ಎರಡು ತಿಂಗಳ ಕಾಲಾವಕಾಶ ನೀಡಿತ್ತು.  ಮಹಾನಗರ ಪಾಲಿಕೆ ರಸ್ತೆ ಗುಂಡಿ ಮುಚ್ಚಿದ್ದು, ಇನ್ನೂ ಎಲ್ಲಾದರು ಗುಂಡಿಗಳಿದ್ದರೆ 0816-2272200 ಅಥವಾ 9449872599 ಸಂಪರ್ಕಿಸುವಂತೆ ಹೇಳಿದೆ.

ರಸ್ತೆ ಗುಂಡಿಗಳಿರುವುದನ್ನು ಗಮನಕ್ಕೆ ತಂದರೆ ಕೂಡಲೇ ಕ್ರಮಕೈಗೊಳ್ಳುವ ಪಾಲಿಕೆ ಭರವಸೆ ಶ್ಲಾಘನೀಯ. ಆದರೆ, ಹೈಕೋರ್ಟ್ ಗೆ ವರದಿ ಸಲ್ಲಿಸುವ ಮುನ್ನ ಸಮಗ್ರವಾಗಿ ರಸ್ತೆ ಗುಡಿಗಳ ಕುರಿತು ಮಾಹಿತಿ ಕಲೆಹಾಕಿ ಸತ್ಯಾಂಶದ ವರದಿ ಸಲ್ಲಿಸಬೇಕಲ್ಲವೇ? ನಗರದ ಬಹುತೇಕ ಕಡೆಗಳಲ್ಲಿ ರಸ್ತೆಗುಂಡಿಗಳಿವೆ. ಹೀಗಾಗಿ ನಾನು ಅವುಗಳ  ಆಧಾರದಲ್ಲಿ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸುತ್ತಿದ್ದೇನೆ. ಸಾರ್ವಜನಿಕರು ಸಹ ಪಾಲಿಕೆ ನೀಡಿರುವ ದೂ.ಸಂ ಸಂಪರ್ಕಿಸಿ ಗುಂಡಿ ಮುಕ್ತ ತುಮಕೂರು ನಗರ ನಿರ್ಮಾಣಕ್ಕೆ ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?