Friday, March 29, 2024
Google search engine
Homeಸಂಘ ಸಂಸ್ಥೆಆ.16ರಿಂದ ಎರಡು ದಿನಗಳ ಅಂತರರಾಷ್ಟ್ರೀಯ ಯುವ ಸಮ್ಮೇಳನ : ವೀರೇಶಾನಂದ ಸರಸ್ವತಿ

ಆ.16ರಿಂದ ಎರಡು ದಿನಗಳ ಅಂತರರಾಷ್ಟ್ರೀಯ ಯುವ ಸಮ್ಮೇಳನ : ವೀರೇಶಾನಂದ ಸರಸ್ವತಿ

Publicstory/prajayoga

ತುಮಕೂರು: ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರ ಮತ್ತು ಆಂತರಿಕ ಗುಣಮಟ್ಟದ ಭದ್ರತಾ ಘಟಕವು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಆ.16 ಮತ್ತು 17 ರಂದು ‘ಆರೋಹ’ ಎಂಬ ಶೀರ್ಷಿಕೆಯಡಿಯಲ್ಲಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಎರಡು ದಿನಗಳ ಅಂತಾರಾಷ್ಟ್ರೀಯ ಯುವ ಸಮ್ಮೇಳನವನ್ನು ಗಂಗಸಂದ್ರ ರಸ್ತೆಯ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ವೀರೇಶಾನಂದ ಸರಸ್ವತಿ ತಿಳಿಸಿದರು.

ನಗರದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಮಠ ಮತ್ತು ಮಿಷನ್ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜೀ ಮಹಾರಾಜ್  ಯುವ ಸಮ್ಮೇಳನವನ್ನು ಉದ್ಘಾಟಿಸುವರು. ಕರ್ನಾಟಕ-ಕೇರಳ ವಿಭಾಗದ ಸಿಬ್ಬಂದಿ ನೇಮಕಾತಿ ಆಯೋಗದ ಪ್ರಾದೇಶಿಕ ನಿರ್ದೇಶಕರಾದ ಎಸ್.ಎನ್. ಗಿರೀಶ್, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ, ತುಮಕೂರು ವಿಭಾಗದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ  ಡಬ್ಲ್ಯೂ.ಡಿ. ಅಶೋಕ್ ಅಂತಾರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮವು ಒಟ್ಟು ಐದು ಗೋಷ್ಠಿಗಳಲ್ಲಿ ಜರುಗಲಿದ್ದು, ಉಪನ್ಯಾಸಕರೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಲಿದೆ. ಎಲ್ಲ ಉಪನ್ಯಾಸಗಳೂ ಆಂಗ್ಲ ಭಾಷೆಯಲ್ಲಿ ಮೂಡಿ ಬರಲಿವೆ. ರಾಮಕೃಷ್ಣ ಪರಂಪರೆಯ ಯತಿಗಳು, ಮಾತಾಜಿಗಳು ಮತ್ತು ಅಂತಾ ರಾಷ್ಟಿçÃಯ ಖ್ಯಾತಿಯ ಚಿಂತಕರು ಹಲವಾರು ವಿಷಯಗಳ ಕುರಿತು ಬೆಳಕು ಚೆಲ್ಲಲಿದ್ದಾರೆ ಎಂದರು.

ಯುವ ಸಮ್ಮೇಳನದ ಮೊದಲ ಗೋಷ್ಠಿಯಲ್ಲಿ ಗದಗ-ವಿಜಯಪುರ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ಮತ್ತು ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ  ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್ ಉಪನ್ಯಾಸ ನೀಡುವರು.

ಗೋಷ್ಠಿ ಎರಡರಲ್ಲಿ ಬೆಂಗಳೂರಿನ ಭವತಾರಣಿ ಆಶ್ರಮದ ಅಧ್ಯಕ್ಷರಾದ ಮಾತಾ ವಿವೇಕಮಯಿ ಮತ್ತು ಮುಂಬೈನ ಆತ್ಮದರ್ಶನ ಪ್ರೆಐವೇಟ್ ಲಿಮಿಟೆಡ್ನ ಸಂಸ್ಥಾಪಕ ನಿರ್ದೇಶಕ ಡಾ. ರಾಧಾಕೃಷ್ಣನ್ ಪಿಳೈ ತಮ್ಮ ವಿಚಾರಗಳನ್ನು ಮಂಡಿಸುವರು ಎಂದು ವಿವರಿಸಿದರು.

ಮೂರನೇ ಗೋಷ್ಠಿಯಲ್ಲಿ ಲಂಡನ್ನ ರಾಮಕೃಷ್ಣ ವೇದಾಂತ ಕೇಂದ್ರದ ಮುಖ್ಯಸ್ಥರಾದ ಸ್ವಾಮಿ ಸರ್ವಸ್ಥಾನಂದಜೀ ಮಹಾರಾಜ್, ಹೈದರಾಬಾದ್ನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಬೋಧಮಯಾನಂದಜೀ ಮಹಾರಾಜ್, ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತೀರವರು ಉಪನ್ಯಾಸ ನೀಡಲಿದ್ದಾರೆ.

ನಾಲ್ಕನೇ ಗೋಷ್ಠಿಯಲ್ಲಿ ನವದೆಹಲಿ ರಾಮಕೃಷ್ಣ ಮಿಷನ್ನ ಕಾರ್ಯದರ್ಶಿ ಸ್ವಾಮಿ ಶಾಂತಾತ್ಮಾನಂದಜೀ ಮಹಾರಾಜ್, ಬೆಂಗಳೂರಿನ ನ್ಯಾಷನಲ್ ಡಿಸೈನ್ ಅಂಡ್ ರಿಸರ್ಚ್ ಫೋರಂನ ಅಧ್ಯಕ್ಷರಾದ ಡಾ. ಪಿ ರಘೋತ್ತಮರಾವ್ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಐದನೇ ಗೋಷ್ಠಿಯಲ್ಲಿ ನವದೆಹಲಿ ರಾಮಕೃಷ್ಣ ಶಾರದಾ ಮಿಷನ್ನ ಪ್ರವ್ರಾಜಿಕ ದಿವ್ಯಾನಂದಪ್ರಾಣಾ ಮತ್ತು ಕೊಚ್ಚಿಯ ಅಂತಾರಾಷ್ಟ್ರೀಯ ಖ್ಯಾತಿಯ ಕಾರ್ಪೊರೇಟ್ ತರಬೇತುದಾರ ವಿಜಯ್ ಮೆನನ್ ಉಪನ್ಯಾಸ ನೀಡುವರು ಎಂದು ಅವರು ವಿವರಿಸಿದರು.

ಸಮಾರೋಪ
ಆ.17ರಂದು ಸಂಜೆ 4 ಗಂಟೆಗೆ ಸಮರೋಪ ಸಮಾರಂಭ ನಡೆಯಲಿದ್ದು, ಕೊಲ್ಕತ್ತಾದ ರಾಮಕೃಷ್ಣ ಮಿಷನ್ ವಿವೇಕಾನಂದ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆ (ಡೀಮ್ಡ್ ವಿಶ್ವವಿದ್ಯಾನಿಲಯ)ಯ ಸಹ ಕುಲಾಧಿಪತಿ  ಸ್ವಾಮಿ ಆತ್ಮಪ್ರಿಯಾನಂದಜೀ ಮಹಾರಾಜ್ ದಿಕ್ಸೂಚಿ ಭಾಷಣ ಮಾಡುವರು.  ಇಂಫಾಲ್ ಕೇಂದ್ರೀಯ ಕೃಷಿ ವಿಶ್ವವಿದ್ಯಾನಿಲಯದ ಕುಲಾಧಿಪತಿ ಪ್ರೊ. ಎಸ್. ಅಯ್ಯಪ್ಪನ್, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿದ ಪ್ರೊ. ಎಂ. ವೆಂಕಟೇಶ್ವರಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳ ಅಡಿಯಲ್ಲಿ ಆ. 16 ರಂದು ನೀಲಾಲಯ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಮೂಡಬಿದ್ರಿಯ ಯಕ್ಷನಿಧಿ ಯಕ್ಷಗಾನ ಶಿಕ್ಷಣ ಸಂಸ್ಥೆ ಮತ್ತು ಮಕ್ಕಳ ಮೇಳ ಸಂಸ್ಥೆಯ ವಿದ್ಯಾರ್ಥಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕು. ಪಂಚಮಿ ಮಾರೂರು ತಂಡದಿಂದ ಯಕ್ಷಗಾನ ಕಾರ್ಯಕ್ರಮವು ನಡೆಯಲಿದೆ.

ಆ. 17 ರಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಿವೇದಿತಾ ನಿಕೇತನ ಸಂಸ್ಥೆಯ ಯುವತಿಯರಿಂದ ದೇಶಪ್ರೇಮ ಕುರಿತಾದ ಗೀತಗುಚ್ಛ ಕಾರ್ಯಕ್ರಮ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ಕಲಾವಿದರಾದ ವಿದ್ವಾನ್ ಮೈಸೂರು ಹರೀಶ್ ಪಾಂಡವ್ ತಂಡದವರಿಂದ ನಿನಾದಂ ಶೀರ್ಷಿಕೆಯಡಿಯಲ್ಲಿ ವಾದ್ಯ ಸಂಗೀತ ಕಾರ್ಯಕ್ರಮವು ಏರ್ಪಡಿಸಲಾಗಿದೆ ಎಂದರು.

ಅಂತಾರಾಷ್ಟ್ರೀಯ ಯುವ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ಸುಮಾರು 250 ವಿದ್ಯಾರ್ಥಿಗಳು ಮತ್ತು 50 ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ. ನೋಂದಾಯಿತ ಪ್ರತಿನಿಧಿಗಳಿಗೆ ಉಪಹಾರ, ಭೋಜನ, ವಸತಿ ವ್ಯವಸ್ಥೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಗದೀಶ ಜಿ.ಟಿ. ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಪ್ರೊ. ರಮ್ಯಕಲ್ಲೂರ್ ಕೆ.ವಿ., ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀನಿಧಿ, ಆಶ್ರಮದ ಸೇವಾಕರ್ತರಾದ ಪ್ರದೀಪ್ ಸಿಂಹ, ಸುನಿಲ್ ಹುಲಿಕಲ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?