Friday, March 29, 2024
Google search engine
Homeಪೊಲಿಟಿಕಲ್ಚಿಕ್ಕನಾಯಕನಹಳ್ಳಿ ಯಿಂದ ಸ್ಪರ್ಧೆ ಇಲ್ಲ : ಮಾಜಿ ಶಾಸಕ ಕೆ.ಷಡಕ್ಷರಿ ಸ್ಪಷ್ಟನೆ

ಚಿಕ್ಕನಾಯಕನಹಳ್ಳಿ ಯಿಂದ ಸ್ಪರ್ಧೆ ಇಲ್ಲ : ಮಾಜಿ ಶಾಸಕ ಕೆ.ಷಡಕ್ಷರಿ ಸ್ಪಷ್ಟನೆ

Publicstory/prajayoga

ತಿಪಟೂರು:  ನಾನು ಚಿಕ್ಕನಾಯಕನಹಳ್ಳಿಗೆ ಹೋಗುವುದಾಗಲೀ ಅಥವಾ ಮಾಧುಸ್ವಾಮಿ ತಿಪಟೂರಿಗೆ ಬಂದು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ತೀರ್ಮಾನ ಮಾಡಿಕೊಂಡಿದ್ದೇವೆ. ನಾನು ಕಾಂಗ್ರಸ್ ಪಕ್ಷದ ಅಭ್ಯರ್ಥಿಯಾಗಿ ಐದು ಬಾರಿ ಸ್ಪರ್ಧಿಸಿ ಎರಡು ಸಾರಿ ಗೆದ್ದು, ಮೂರು ಬಾರಿ ಸೋತಿದ್ದೇನೆ. ಮುಂದಿನ ಚುನಾವಣೆಯಲ್ಲೂ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತೇನೆ. ಅದರಲ್ಲಿ ಸಂಶಯ ಬೇಡ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ಸ್ಪಷ್ಟಪಡಿಸಿದರು

ಇಂದು ತಮ್ಮ ನಿವಾಸದಲ್ಲಿ‌ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮಾಧುಸ್ವಾಮಿ ಅವರಿಗೆ ನಮ್ಮ ಪಕ್ಷಕ್ಕೆ ಬನ್ನಿ. ಚಿಕ್ಕನಾಯಕಹಳ್ಳಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಅವಕಾಶ ಮಾಡಿಕೊಡುತ್ತೇವೆ ಎಂದಿದ್ದೆ. ಅದಕ್ಕವರು ಪ್ರತಿಕ್ರಿಯಿಸಿ, ನಾನ್ಯಾಕೆ ಪಕ್ಷ ಬಿಟ್ಟು ಬರಲಿ. ಬಿಜೆಪಿ ಪಕ್ಷದಿಂದ ಶಾಸಕನಾಗಿ, ಸಚಿವನೂ ಆಗಿದ್ದೇನೆ. ಆದ್ದರಿಂದ ಪಕ್ಷ ಬದಲಾವಣೆ ಮಾಡುವ ಅವಶ್ಯಕತೆ ನನಗಿಲ್ಲ ಎಂದಿದ್ದರು. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಾನು ಅವರನ್ನು ಕ್ಯಾಶ್ಯುಯಲ್ ಆಗಿ ಕೇಳಿದ್ದೆ ಅಷ್ಟೆ. ಆಗ ಹೀಗೇಳಿದ್ದರು ಎಂದು ತಿಳಿಸಿದ್ದರು.

ಈ ಬಗ್ಗೆ  ಕಾಂಗ್ರೆಸ್ ಪಕ್ಷದಿಂದ ತಿಪಟೂರಿನಲ್ಲಿ ಮಾಧುಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಸತ್ಯವಲ್ಲ ಎಂದು ಷಡಕ್ಷರಿ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?