Tuesday, April 16, 2024
Google search engine
Homeವಿದ್ಯಾ ಸಂಸ್ಥೆತುಮಕೂರು ವಿವಿಯಲ್ಲಿ ಆ.20 ರಂದು ಉದ್ಯೋಗ ಮೇಳ

ತುಮಕೂರು ವಿವಿಯಲ್ಲಿ ಆ.20 ರಂದು ಉದ್ಯೋಗ ಮೇಳ

Publicstory/prajayoga

ತುಮಕೂರು:  ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ವತಿಯಿಂದ ಆ.20 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಂಡಿರುವುದಾಗಿ ಎಂಬಿಎ ವಿಭಾಗದ ಮುಖ್ಯಸ್ಥೆ ನೂರ್ ಅಫ್ಸಾ ಅವರು ತಿಳಿಸಿದರು.

ವಿ.ವಿ. ಆವರಣದ ಡಾ. ಪಿ.ಸದಾ ನಂದಮಯ್ಯ ಬ್ಲಾಕ್ ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಉದ್ಯೋಗ ಮೇಳದಲ್ಲಿ ಸುಮಾರು 30 ರಿಂದ 40 ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 2000 ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ ಎಂದರು.

ಪಿಯುಸಿಯಿಂದ ಹಿಡಿದು ಬಿಎ, ಬಿಕಾಂ. ಬಿಎಸ್ಸಿ, ಇಂಜಿನಿಯರಿಂಗ್, ಎಂಬಿಎ ಸೇರಿ ಅನೇಕ ಕೋರ್ಸ್ಗಳನ್ನು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದ್ದು, ಯಾವುದೇ ನೋಂದಣಿ ಶುಲ್ಕವಿಲ್ಲದೆ ಉಚಿತವಾಗಿ ನಡೆಸಲಾಗು ವುದು ಎಂದರು.

ವಿದ್ಯಾಭ್ಯಾಸ ಮುಗಿದ ನಂತರ ವಿದ್ಯಾರ್ಥಿಗಳು ಕೆಲಸಕ್ಕಾಗಿ ಬೆಂಗಳೂರು ನಗರ ಸೇರಿದಂತೆ ಬೇರೆ, ಬೇರೆ ಕಡೆ ಹೋಗಿ ಹುಡುಕಿ ಉದ್ಯೋಗ ಪಡೆಯುವುದು ಕಷ್ಟಕರ. ಆದ ಕಾರಣ ನಾವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಿರುವುದಾಗಿ ತಿಳಿಸಿದರು.

ತುಮಕೂರು ವಿ.ವಿ. ಎಂಬಿಎ ವಿಭಾಗದಿಂದ ರಾಜ್ಯದ ಪ್ರತಿಷ್ಠಿತ 75 ಕಂಪನಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಪೈಕಿ 30 ರಿಂದ 40 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗ ವಹಿಸಲು ಒಪ್ಪಿಗೆ ನೀಡಿವೆ. ಆಕ್ಸಿಸ್ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕಾರ್ವಿ, ಯುರೇಕಾ ಫೋರ್ಬ್ಸ್, ಚೋಳಮಂಡಲ, ಸಮೃದ್ಧಿ ಸರ್ವೀಸಸ್ ಇತ್ಯಾದಿ ಪ್ರಮುಖ ಕಂಪನಿಗಳು ಭಾಗ ವಹಿಸಲಿವೆ ಎಂದರು.

ತುಮಕೂರು ನಗರದ ಹೊರ ವಲಯದಲ್ಲಿರುವ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗಿರುವ ಅನೇಕ ಕಂಪನಿಗಳನ್ನು ಇಂದು ಭೇಟಿ ಮಾಡಿ ಉದ್ಯೋಗ ಮೇಳದಲ್ಲಿ ಭಾಗ ವಹಿಸುವಂತೆ ಕೋರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2018ರಲ್ಲಿ ತುಮಕೂರು ವಿ.ವಿ. ಯಿಂದ ಉದ್ಯೋಗ ಮೇಳ ಆಯೋಜಿಸಿದ್ದು, ಸುಮಾರು 350 ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಾಗಿತ್ತು. ಪ್ರಸಕ್ತ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ಪತ್ರವನ್ನು ನೀಡಲಾಗುವುದು ಎಂದರು.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳು ನಮ್ಮಿಂದ ಹಾಗೂ ನಾವು ಸದರಿ ಕಂಪನಿಗಳಿಂದ ಯಾವುದೇ ಹಣಕಾಸು ಸಹಾಯವನ್ನು ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಆ.20 ರಂದು ಬೆಳಿಗ್ಗೆ 10.30ಕ್ಕೆ ತುಮಕೂರು ವಿ.ವಿ. ಕುಲಪತಿ ಪ್ರೊ.ವೆಂಕಟೇಶ್ವರಲು ಉದ್ಯೋಗ ಮೇಳವನ್ನು ಉದ್ಘಾಟಿಸುವರು. ಜಯಚಂದ್ರ ಆರಾಧ್ಯ, ಕಿಶೋರ್ಚಂದ್ರ ಇವರು ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?