Friday, April 12, 2024
Google search engine
Homeಪೊಲಿಟಿಕಲ್ಮೈತ್ರಿ ಸರ್ಕಾರದ‌ ದಂಧೆಯಲ್ಲಿ ಕಾಂಗ್ರೆಸ್‌ ಸಚಿವರು ಭಾಗಿಯಾಗಿಲ್ಲ : ಪರಂ

ಮೈತ್ರಿ ಸರ್ಕಾರದ‌ ದಂಧೆಯಲ್ಲಿ ಕಾಂಗ್ರೆಸ್‌ ಸಚಿವರು ಭಾಗಿಯಾಗಿಲ್ಲ : ಪರಂ

Publicstory/prajayoga

ತುಮಕೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕಮೀಷನ್ ದಂಧೆ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಕಾಂಗ್ರೆಸ್ ಸಚಿವರ್ಯಾರೂ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆದ ದಿ. ಸೂಲಗಿತ್ತಿ ನರಸಮ್ಮನವರ 102 ನೇ ಜಯಂತ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೈತ್ರಿ ಸರ್ಕಾರದ ಅವಧಿಯಲ್ಲಿ ಪರ್ಸಂಟೆಜ್ ದಂಧೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಈಗ ಹೇಳಿದ್ದರೆ ಯಾವ ಸಚಿವಾಲಯದಲ್ಲಿ, ಯಾವ ಸಚಿವರು ಮಾಡಿದ್ದಾರೆ ಎಂಬುದನ್ನು ಅವರೇ ಹೇಳಬೇಕಿದೆ. ಏಕೆಂದರೆ  ಮುಖ್ಯಮಂತ್ರಿಯಾಗಿದ್ದವರು ಅವರು. ಹಾಗಾಗಿ ಜವಾಬ್ದಾರಿಯಿಂದ ಈ ಹೇಳಿಕೆ ನೀಡಿದ್ದಾರೆ ಎಂದೆನಿಸುತ್ತದೆ. ಆದರೆ, ನಮ್ಮ ಕಾಂಗ್ರೆಸ್ನ ಸಚಿವರು ಯಾರೂ ಸಹ ಈ ಪರ್ಸಂಟೆಜ್ ದಂಧೆಯಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ಸರ್ಕಾರದ ಸೂಚನೆ ಇರಬಹುದು

ತುಮಕೂರು: ವಿವಿಯಲ್ಲಿ ರಾಜಕೀಯ ಒತ್ತಡದಿಂದ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ಸಿಂಡಿಕೇಟ್ ಸಭೆ ಮುಂದಾಗಿರಬಹುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿಪರಮೇಶ್ವರ್ ತಿಳಿಸಿದರು.

ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆದ ದಿ. ಸೂಲಗಿತ್ತಿ ನರಸಮ್ಮನವರ 102 ನೇ ಜಯಂತ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಏಕಾಏಕಿ ಕುಲಪತಿಗಳು, ಕುಲಸಚಿವರು, ವಿವಿ ಸಿಂಡಿಕೇಟ್ ಸದಸ್ಯರುಗಳು  ಈ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ವಿವಿಯಲ್ಲಿ ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಮಾಡಲು ವಿವಿ ಸಿಂಡಿಕೇಟ್ ಸಭೆ ಒಪ್ಪಿಗೆ ಸೂಚಿಸಿದೆ. ಆದರೆ, ತುಮಕೂರು ವಿವಿಯನ್ನು ಇದುವರೆಗೆ ಆಡಳಿತ ನಡೆಸಿರುವ ಎಲ್ಲ ಸರ್ಕಾರಗಳು ನಿರ್ಲಕ್ಷ್ಯ ಮಾಡಿವೆ ಎಂದು ಹೇಳಿದರು.

ನನ್ನ ಪ್ರಯತ್ನದಿಂದ ವಿಶ್ವವಿದ್ಯಾನಿಲಯವನ್ನು ಸ್ಥಾಪನೆಯಾಯಿತು. ಆದರೆ ಇದುವರೆಗೂ ಹೊಸ ಕ್ಯಾಂಪಸ್ಗೆ ಹೋಗಲು ಸಾಧ್ಯವಾಗಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚು ಅನುದಾನ ಬಿಡುಗಡೆ ಮಾಡಿ ಆದಷ್ಟು ಬೇಗ ಹೊಸ ಕ್ಯಾಂಪಸ್ಗೆ ತುಮಕೂರು ವಿವಿ ಸ್ಥಳಾಂತರವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?