Saturday, April 13, 2024
Google search engine
Homegovernanceಮತದಾರರ ಗುರುತಿನ ಚೀಟಿಗೆ ಅಧಾರ್ ಜೋಡಣೆ : ತಹಶಿಲ್ದಾರ್

ಮತದಾರರ ಗುರುತಿನ ಚೀಟಿಗೆ ಅಧಾರ್ ಜೋಡಣೆ : ತಹಶಿಲ್ದಾರ್

PublicStory/prajayoga

ತಿಪಟೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲು     ತಿಪಟೂರು ತಾಲೂಕು ಗ್ರೇಡ್ 2 ತಹಶಿಲ್ದಾರ್ ಜಗನ್ನಾಥ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. 

ನಗರದ ತಾಲೂಕು ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು ,  ಚುನಾವಣೆಗಳಲ್ಲಿ (Election) ಮತದಾರರ ಗುರುತಿನ ಚೀಟಿ (Identity News), ನೋಂದಣಿ (Register) ದುರುಪಯೋಗ ತಡೆಯೋಕೆ, ಮತದಾರರ ನೋಂದಣಿ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ತಾಲೂಕಿನಲ್ಲಿ   ಮತದಾರ ಗುರುತಿನ ಚೀಟಿಗೆ ಆದಾರ್ ಜೋಡಣೆ ಮಾಡಲು  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚುನಾವಣಾ ಆಯೋಗದ (Election Commission) ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಕಾನೂನು ಮತ್ತು ನ್ಯಾಯಾಲಯ ಸಚಿವಾಲಯ ಪ್ರಜಾ ಪ್ರತಿನಿಧಿ ಕಾಯ್ದೆ-1950 ಮತ್ತು 51ರ ಕಾಯ್ದೆಗಳಿಗೆ, ಚುನಾವಣಾ ಕಾನೂನುಗಳ ತಿದ್ದುಪಡಿ ಕಾಯ್ದೆ-2021ರ ಅನ್ವಯ ಬದಲಾವಣೆ ತಂದಿದೆ. ಆಗಸ್ಟ್ 1 ರಿಂದ ಈ ತಿದ್ದುಪಡಿ ಅಂಶಗಳು ಜಾರಿಗೆ ಬರಲಿವೆ.
ತಿದ್ದುಪಡಿ ಕಾಯ್ದೆಯ ಅನ್ವಯ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಗೊಳ್ಳಲು ನಮೂನೆ-6, ಮತದಾರರ ಪಟ್ಟಿಯ ದೃಢೀಕರಣದ ಉದ್ದೇಶಕ್ಕಾಗಿ ಆಧಾರ್ ಸಂಖ್ಯೆಯ ಮಾಹಿತಿ ಪತ್ರ ನಮೂನೆ-6ಬಿ, ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ ಅಥವಾ ಹೆಸರು ತೆಗೆದು ಹಾಕಲು ಮತದಾರರ ಅರ್ಜಿ ನಮೂನೆ-7, ಮತದಾರ ಗುರುತಿನ ಚೀಟಿ ಅಥವಾ ಪಟ್ಟಿಯಲ್ಲಿ ತಿದ್ದುಪಡಿ ತರಲು ನಮೂನೆ-8ರ ಪರಿಷ್ಕೃತ ನಮೂನೆ ಅರ್ಜಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ವರ್ಷಕ್ಕೆ ನಾಲ್ಕು ಬಾರಿ ಅವಕಾಶವನ್ನು ಕಲ್ಪಿಸಲಾಗಿದೆ. ಜನವರಿ 01, ಏಪ್ರಿಲ್ 01, ಜುಲೈ 01, ಹಾಗೂ ಅಕ್ಟೋಬರ್ 01 ತಾರೀಖಿಗೆ 18 ವರ್ಷ ಪೂರೈಸಿದವರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ನೋಂದಾಯಿಸಿಕೊಳ್ಳಬಹುದು. ಸ್ವಯಂ ಪ್ರೇರಿತವಾಗಿ ತಮ್ಮ ಆಧಾರ್ ಸಂಖ್ಯೆ ಜೋಡಣೆಗೆ ಮತಗಟ್ಟೆ ಮಟ್ಟದ ಅಧಿಕಾರಿ(ಬಿ.ಎಲ್.ಓ)ಗಳಿಗೆ ನಮೂನೆ-6ಬಿ ರಲ್ಲಿ ಅರ್ಜಿಸಲ್ಲಿಸಬಹುದು.

ಇದರ ಹೊರತಾಗಿ ಓಟರ್ ಹೆಲ್ಪ್ಲೈನ್ ಆ್ಯಪ್  ಮೂಲಕ ಸಹ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆ ಇಲ್ಲದಿರುವವರು ಪರ್ಯಾಯ ದಾಖಲೆಗಳಾದ ಎನ್.ಆರ್.ಇ.ಜಿ. ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯಿಂದ ನೀಡಲಾದ ಭಾವಚಿತ್ರ ಇರುವ ಪಾಸ್ ಬುಕ್, ಕಾರ್ಮಿಕ ಇಲಾಖೆಯಿಂದ ನೀಡಲಾದ ಆರೋಗ್ಯ ಮಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾಡ್, ಪಾಸ್ ಪೋರ್ಟ್, ಪಿಂಚಣಿ ದಾಖಲೆ ಬಳಸಬಹುದು.

ಎನ್.ಪಿ.ಆರ್ ಅಡಿಯಲ್ಲಿ ನೀಡಿರುವ ಆರ್.ಜಿ.ಐ ಮೂಲಕ ನೀಡಲಾದ ಸ್ಮಾರ್ಟ್ ಕಾರ್ಡ್, ಕೇಂದ್ರ, ರಾಜ್ಯ, ಸಾರ್ವಜನಿಕ ವಲಯದ ಉದ್ದಿಮೆಗಳು ನೀಡಿದ ಭಾವಚಿತ್ರ ಇರುವ ಗುರುತಿನ ಚೀಟಿ, ಸಂಸತ್, ವಿಧಾನ ಸಭಾ, ವಿಧಾನ ಪರಿಷತ್ ಸದಸ್ಯರಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ ಸಲ್ಲಿಸಬಹುದು ಎಂದು ಇದೇ ವೇಳೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿರಸ್ತೇದಾರ್ ರವಿ ಕುಮಾರ್ ಉಪ ತಹಶಿಲ್ದಾರ್ ಗಳಾದ  ಸ್ವಾಮಿ ಹಾಗೂ ಅಶ್ವತ್ಥನಾರಾಯಣ್.
ಬಿಜೆಪಿ ಪಕ್ಷದ ತಾಲೂಕು ಅಧ್ಯಕ್ಷ ಸುರೇಶ್ ನಗರಾಧ್ಯಕ್ಷ ಗುಲಾಬಿ ಸುರೇಶ್ ಹಾಗು ವಿವಿಧ ಪಕ್ಷದ ಮುಖಂಡರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?