Friday, April 12, 2024
Google search engine
Homeಕ್ರೈಂಹೂವಿನ ಕುಂಡಗಳಲ್ಲಿ ಗಾಂಜಾ ಬೆಳೆ: ಆರೋಪಿ ಬಂಧನ

ಹೂವಿನ ಕುಂಡಗಳಲ್ಲಿ ಗಾಂಜಾ ಬೆಳೆ: ಆರೋಪಿ ಬಂಧನ

Publicstory/prajayoga

ವರದಿ- ದೇವರಾಜ್ ಗುಬ್ಬಿ

ಗುಬ್ಬಿ: ಪಟ್ಟಣದ ಜ್ಯೋತಿನಗರ ಬಡಾವಣೆಯ ಮನೆಯೊಂದರ ಎರಡು ಹೂವಿನ ಕುಂಡಗಳಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿ ನಗರ ನಿವಾಸಿ ಆಟೋ ಚಾಲಕ ಗಫರ್ ಅಲಿಖಾನ್ (42) ಬಂಧಿತ ಆರೋಪಿ.
ಈತ ತನ್ನ ಮನೆಯ ಹೂವಿನ ಕುಂಡಗಳ ಮಧ್ಯೆ ಗಾಂಜಾ  ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮನೆಯನ್ನು ಪರಿಶೀಲನೆ ನಡೆಸಿದಾಗ ಎರಡು ಹೂವಿನ ಕುಂಡಗಳಲ್ಲಿ  ಗಾಂಜಾ ಬೆಳೆದಿರುವುದು ಬೆಳಕಿಗೆ ಬಂದಿದ್ದು, ಗುಬ್ಬಿ ಮತ್ತು ಚೇಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾಲು ವಶಪಡಿಸಿದ್ದಾರೆ.

ಸ್ಥಳಕ್ಕೆ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಆಗಮಿಸಿ ಮಹಜರ್ ನಡೆಸಿದರು.

ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವ ಗುಬ್ಬಿ ಪೊಲೀಸರು,  ಪಿಎಸ್ಐ ಮುತ್ತುರಾಜ್ ಮತ್ತು ಚೇಳೂರು ಪಿಎಸ್ಐ ನವೀನ್ ಕುಮಾರ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಈ ಪ್ರಕರಣ ಬೇಧಿಸುವಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಹದೇವಯ್ಯ,  ನವೀನ್, ರಂಗನಾಥ್, ಮಧುಸೂದನ್ ಮತ್ತು ದೇವರಾಜ್ ಕಾರ್ಯನಿರ್ವಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?