Thursday, April 18, 2024
Google search engine
Homeಪೊಲಿಟಿಕಲ್ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಶ್ಲಾಘನೀಯ : ಶಾಸಕ ಡಿ.ಸಿ.ಗೌರಿಶಂಕರ್

ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಶ್ಲಾಘನೀಯ : ಶಾಸಕ ಡಿ.ಸಿ.ಗೌರಿಶಂಕರ್

Publicstory/prajayoga

ತುಮಕೂರು ಗ್ರಾಮಾಂತರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತುಮಕೂರು ಗ್ರಾಮಾಂತರ ಶಾಸಕರ ಆರ್ಥಿಕ ಸಹಕಾರದೊಂದಿಗೆ ಅನುಷ್ಠಾನಗೊಂಡಿರುವ ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿಯ ಕಂಭತ್ತನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಶುದ್ಧಗಂಗಾ ಘಟಕದ ಉದ್ಘಾಟನೆಯನ್ನು ತುಮಕೂರು ಗ್ರಾಮಾಂತರದ ಶಾಸಕ ಡಿ.ಸಿ.ಗೌರಿಶಂಕರ್ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಶ್ಲಾಘನೀಯ. ಧರ್ಮಸ್ಥಳ ಸಂಸ್ಥೆಯಿಂದ 5 ಲಕ್ಷ ಮತ್ತು ಶಾಸಕರ ಪ್ರದೇಶಾಭಿವೃದ್ಧಿ  ಅನುದಾನದಲ್ಲಿ 5 ಲಕ್ಷ ಒಟ್ಟು 10 ಲಕ್ಷ ರೂ ವೆಚ್ಚದಲ್ಲಿ ಶುದ್ಧಗಂಗಾ ಘಟಕ ನಿರ್ಮಾಣಗೊಂಡಿದ್ದು, ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಕ್ಯಾನ್ ಗಳನ್ನು ಸಾರ್ವಜನಿಕರಿಗೆ ವಿತರಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುನಿತಾಪ್ರಭು  ಮಾತನಾಡಿ, ತುಮಕೂರು ತಾಲೂಕಿನಲ್ಲಿ ಒಟ್ಟು 12 ಶುದ್ಧಗಂಗಾ ಘಟಕ ರಚನೆ ಮಾಡಿದ್ದು, ಎಲ್ಲಾ ಘಟಕಗಳು ಜನರಿಗೆ ತುಂಬಾ ಅನುಕೂಲವಾಗುವಂತೆ ಉತ್ತಮವಾಗಿ ನಿರ್ವಹಣೆ ಆಗುತ್ತಿವೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರೂ ಮತ್ತು ಸಮಾಜ ಸೇವಕರೂ ಆದ ಜಿ.ಪಾಲನೇತ್ರಯ್ಯ,ಕೆರೆ ಅಭಿಯಂತರಾದ ಅರುಣ್, ಶುದ್ಧಗಂಗಾ ಮೇಲ್ವಿಚಾರಕರಾದ ಶಿವರಾಮ್,ವಲಯ ಮೇಲ್ವಿಚಾರಕರಾದ ಹೇಮಂತ್ ಕುಮಾರ್,ಜೆವಿಕೆ ಸಮನ್ವಯಾಧಿಕಾರಿ ಸಿಂಧೂ, ಕೈದಾಳ ರಮೇಶ್, ದೇವರಾಜು, ಶಿವಕುಮಾರಸ್ವಾಮಿ, ನರಸಿಂಹಮೂರ್ತಿ, ರಾದಾರಾಜಣ್ಣ, ಸ್ವಾಮಿಗೌಡ, ಮಂಜಣ್ಣ, ಲೋಕೇಶ್, ಗಂಗಣ್ಣ ಹಾಗೂ ಗ್ರಾಮದ ಮುಖಂಡರು ಸಂಘದ ಸದಸ್ಯರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?