Tuesday, March 19, 2024
Google search engine
Homeವಿದ್ಯಾ ಸಂಸ್ಥೆಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ

ಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ

Publicstory/prajayoga

ತಿಪಟೂರು : ಗ್ರಾಮಾಂತರ ಪ್ರದೇಶದಲ್ಲಿ ಇಂಜಿಯರಿಂಗ್ ಕಾಲೇಜನ್ನು ನಡೆಸುವುದೇ ಕಷ್ಟಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಅದೇ ಕಾಲೇಜಿಗೆ ಕೇಂದ್ರದ ಎನ್.ಬಿ.ಎ ಮಾನ್ಯತೆ ದೊರೆತಿರುವುದರಿಂದ ಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಅಧ್ಯಕ್ಷ ತಿಪ್ಪೇರುದ್ರಪ್ಪ ತಿಳಿಸಿದರು.

ನಗರದ ಕೆ.ಐ.ಟಿ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ನ್ಯಾಷನಲ್ ಬೋರ್ಡ್ ಆಫ್ ಆಕ್ರಿಡೇಷನ್ (ಎನ್.ಬಿ.ಎ) ನವದೆಹಲಿ ಕಮಿಟಿಯವರು ನಮ್ಮ ಕಾಲೇಜಿನ್ನು ಪರಿಶೀಲಿಸಿದರು. ಈ ಪರಿಶೀಲನೆಯಲ್ಲಿ ದೇಶದ ಪ್ರತಿಷ್ಠಿತ ಐ.ಐ.ಟಿ ಪ್ರೊಪೆಸರ್‌ಗಳು ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಗುಣಮಟ್ಟ, ಕಲಿಕಾ ವಾತಾವರಣ, ಕಾಲೇಜಿನ ಮೂಲಸೌಕರ್ಯಗಳು, ಹಲವಾರು ವರ್ಷದ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ ಕಾಲೇಜಿನ ಉಪನ್ಯಾಸಕರ ವಿದ್ಯಾರ್ಹತೆಯನ್ನು ನೋಡಿ ನಮ್ಮ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ಸಿಕ್ಕಿರುವುದು ಕಾಲೇಜಿನ ಕೀರ್ತಿಯ ಜೊತೆಗೆ ವಿದ್ಯಾರ್ಥಿಗಳಿಗೆ, ಮತ್ತು ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಕಲ್ಪತರು ವಿದ್ಯಾಸಂಸ್ಥೆಯ ಖಜಾಂಚಿ ಶಿವಪ್ರಸಾದ್ ಮಾತನಾಡಿ, ನಮ್ಮ ಕಾಲೇಜು ಈಗ ವಿಶ್ವಮಟ್ಟದಲ್ಲಿ ಮಾನ್ಯತೆ ಪಡೆದಿರುವುದರಿಂದ ನಮ್ಮಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಎಲ್ಲೆಡೆ ಮನ್ನಣೆ ದೊರೆಯಲಿದ್ದು ಉದ್ಯೋಗವಕಾಶಗಳು ಹೆಚ್ಚಲಿವೆ ಎಂದು ತಿಳಿಸಿದರು.

ಕಾರ್ಯದರ್ಶಿ ಸುಧಾಕರ್ ಮಾತನಾಡಿ, ನಮ್ಮ ಸಂಸ್ಥೆಗೆ ಎನ್.ಬಿ.ಎ ಮಾನ್ಯತೆ ಎಂ.ಬಿ.ಎ ಗೆ ಮೊದಲೇ ದೊರೆತಿತ್ತು. ಈಗ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಅಂಡ್ ಇಂಜಿನಿಯರಿಂಗ್‌ಗೆ ದೊರೆತಿದ್ದು, ಈ ಮಾನ್ಯತೆ ಆಗಸ್ಟ್ 2022ರಿಂದ ಜೂನ್ 2025ರ ವರೆಗೂ ಇರುತ್ತದೆ. ಇದಕ್ಕೆಲ್ಲಾ ಕಾರಣ ನಮ್ಮ ತಾಲೂಕಿನ ಮೊದಲ ಸಚಿವರಾದ ಟಿ.ಎಂ. ಮಂಜುನಾಥ್ ರವರು 1986ರಲ್ಲಿ ಕಲ್ಪತರು ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿ ಇಲ್ಲಿ ಗ್ರಾಮೀಣ ಮಕ್ಕಳಿಗೆ ಗಗನ ಕುಸುಮವಾಗಿದ್ದ ಇಂಜಿನಿಯರಿಂಗ್ ಪದವಿ ದೊರೆಯುವಂತೆ ಮಾಡಿದರು ಎಂದರು.

ನಮ್ಮ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲೂ ಮುಂದಿದ್ದು ವಿ.ಟಿ.ಯು ನ ಟಾಪ್ ಹತ್ತು ವಿದ್ಯಾರ್ಥಿಗಳಲ್ಲಿ 4-5 ವಿದ್ಯಾರ್ಥಿಗಳು ಮತ್ತು ಟಾಪ್ 100 ವಿದ್ಯಾರ್ಥಿಗಳಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುತ್ತಾರೆ. ಈ ಬಾರಿಯ ಮೆಕಾನಿಕಲ್ ವಿಭಾಗದಲ್ಲಿ ಶೃತಿ ಎಚ್.ಎಂ.ವಿ.ಟಿ.ಯುನಲ್ಲಿ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜು, ಬಿ.ಎಸ್.ಉಮೇಶ್, ಜಿ.ಪಿ ದೀಪಕ್, ಟಿ.ಎಸ್.ಬಸವರಾಜು, ಕಾರ್ಯದರ್ಶಿಗಳಾದ ಜಿ.ಎಸ್.ಉಮಾಶಂಕರ್, ಟಿ.ಯು ಜಗದೀಶ್‌ಮೂರ್ತಿ, ಪ್ರಾಂಶುಪಾಲ ಜಿ.ಡಿ.ಗುರುಮೂರ್ತಿ, ಹೆಚ್.ಓ.ಡಿಗಳಾದ ಯೋಗಾನಂದ್, ಶಶಿಧರ್ ಸೇರಿದಂತೆ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?