Friday, April 26, 2024
Google search engine
Homeಜಸ್ಟ್ ನ್ಯೂಸ್ತುಮಕೂರು; 169 ಪೊಕ್ಸೊ ಪ್ರಕರಣ ದಾಖಲು! ಏನಿದು ಪೊಕ್ಸೊ?

ತುಮಕೂರು; 169 ಪೊಕ್ಸೊ ಪ್ರಕರಣ ದಾಖಲು! ಏನಿದು ಪೊಕ್ಸೊ?

Public story.in


ತುಮಕೂರು; ,ಸಂಕಷ್ಟದಲ್ಲಿರುವ ಅಥವಾ ತೊಂದರೆಯಲ್ಲಿರುವ 18 ವರ್ಷದೊಳಗಿನ ಮಕ್ಕಳ ರಕ್ಷಣೆಗಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.


169 ಪೊಕ್ಸೊ ಪ್ರಕರಣ ದಾಖಲು

ಏಪ್ರಿಲ್ 2022 ರವರೆಗೆ ಬಾಲನ್ಯಾಯ ಮಂಡಳಿಯಲ್ಲಿ 109 ಪ್ರಕರಣಗಳು ದಾಖಲಾಗಿದೆ. ಅವುಗಳಲ್ಲಿ 50 ಪ್ರಕರಣಗಳು ಇತ್ಯರ್ಥಗೊಂಡಿದ್ದು 59 ಪ್ರಕರಣಗಳು ಬಾಕಿ ಇರುವುದಾಗಿ ತಿಳಿಸಿದರು. ಇನ್ನೂ ಇದೇ ಅವಧಿಯಲ್ಲಿ ಪೋಕ್ಸೋ ಕಾಯಿದೆಯಡಿ 169 ಪ್ರಕರಣಗಳು ದಾಖಲಾಗಿದ್ದು ಇವುಗಳಲ್ಲಿ 28 ಪ್ರಕರಣಗಳು ಖುಲಾಸೆಗೊಂಡು 3 ಪ್ರಕರಣಗಳಲ್ಲಿ ಶಿಕ್ಷೆ ಪ್ರಕಟಿಸಲಾಗಿ ಒಟ್ಟು 31 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದರಲ್ಲದೇ 138 ಪ್ರಕರಣಗಳು ಬಾಕಿ ಇರುವ ಬಗ್ಗೆ ತಿಳಿಸಿದರು. ಶಿಕ್ಷೆಯಾದ 3 ಪ್ರಕರಣಗಳ ಪೈಕಿ 2 ಪ್ರಕರಣಗಳಿಗೆ ತಲಾ 6 ಲಕ್ಷ ರೂ.ಗಳನ್ನು ಮತ್ತು 1 ಪ್ರಕರಣಕ್ಕೆ 1 ಲಕ್ಷ.ರೂ.ಗಳನ್ನು ಪರಿಹಾರವನ್ನು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳಾ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಬೀದಿ ಬದಿಯ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಯ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಬಾಲ್ಯ ವಿವಾಹ ಬಾಲಕಾಮರ್ಿಕ, ಚಿಂದಿ ಆಯುವ /ಭಿಕ್ಷಾಟನೆಯಲ್ಲಿ ತೊಡಗಿರುವ, ಶಾಲೆ ಬಿಟ್ಟ ಮಕ್ಕಳ, ವಸತಿ ಸೌಲಭ್ಯ ಪ್ರಕರಣಗಳ ಬಗ್ಗೆ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿದರೆ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯವಿರುವ ರಕ್ಷಣೆ ಮತ್ತು ಪೋಷಣೆಯನ್ನು ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


ಮಕ್ಕಳ ಮೇಲೂ ಅನೇಕ ಲೈಂಗಿಕ ದೌರ್ಜನ್ಯ ಅಥವಾ ಯಾವುದೇ ರೀತಿಯ ದೌರ್ಜನ್ಯಗಳು ನಡೆಯುತ್ತವೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಗಮನ ಹರಿಸುವ ಪೋಕ್ಸೋ ಕಾಯ್ದೆ ಬಗ್ಗೆ ಮಕ್ಕಳು, ಪೋಷಕರು, ಶಿಕ್ಷಕರು ಸೇರಿ ಪ್ರತಿಯೊಬ್ಬರಿಗೂ ತಿಳಿದುಕೊಳ್ಳಬೇಕಾದ ಹಕ್ಕಿದೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಕ್ರಮಬದ್ಧವಾದ ಕಾರ್ಯವಿಧಾನಗಳನ್ನು ಅನುಸರಿಸಿ ಜಿಲ್ಲೆಯಲ್ಲಿನ ಬೀದಿ ಬದಿಯ ಮಕ್ಕಳನ್ನು ಗುರುತಿಸುವುದು ಹಾಗೂ ಪುನರ್ವಸತಿ ಕಲ್ಪಿಸುವಲ್ಲಿ ಇಲಾಖೆಗಳು ಕ್ರಮವಹಿಸಬೇಕು ಎಂದರಲ್ಲದೇ ಗುರುತಿಸಿದ ಮಕ್ಕಳ ವಿವರಗಳನ್ನು ಓಅಕಅಖ ಸಿದ್ದಪಡಿಸಿದ ಬಾಲ ಸ್ವರಾಜ್ ಪೋರ್ಟಲ್ ನಲ್ಲಿ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ, ಪೋಲಿಸ್ ,ಕಾರ್ಮಿಕ ಇಲಾಖೆ, ನಗರ ಸ್ಥಳಿಯ ಸಂಸ್ಥೆಗಳು, ಶಿಕ್ಷಣ, ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಆರೋಗ್ಯ ಇಲಾಖಾಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳ ಗುರುತಿಸಿ ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಬೇಕಲ್ಲದೇ ಮಕ್ಕಳೊಂದಿಗೆ ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡಿ ಪುನರ್ವಸತಿ ಕಲ್ಪಿಸಬೇಕು ಎಂದ ಅವರು ಮಕ್ಕಳನ್ನು ವಸತಿಶಾಲೆ, ವಸತಿ ನಿಲಯಗಳಿಗೆ ದಾಖಲು ಮಾಡಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಕ್ಕಳಾ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಸಭೆಗೆ ಮಾಹಿತಿ ನೀಡುತ್ತಾ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳ ವಿಶೇಷ ಶಿಶುಪಾಲನಾ ಕಾರ್ಯಕ್ರಮದಡಿ ಎ???ವಿ ಭಾಧಿತ 278 ಮಕ್ಕಳಿಗೆ 31.99 ಲಕ್ಷ ರೂ.ಗಳ ಆಥರ್ಿಕ ನೆರವನ್ನು ನೀಡಲಾಗಿದೆ ಎಂದರಲ್ಲದೇ ಕೋವಿಡ್ ಮತ್ತು ಕೋವಿಡೇತರ ಭಾದಿತ ಮಕ್ಕಳ ವಿವರಗಳನ್ನು ಬಾಲಸ್ವರಾಜ್ ಪೋರ್ಟಲ್ ನಲ್ಲಿ ಅಳವಡಿಸಲಾಗಿದೆ ಎಂದ ಅವರು 115 ಮಕ್ಕಳನ್ನು ಪ್ರಾಯೋಜಿತ ಕಾರ್ಯಕ್ರಮದಡಿ ಆಥರ್ಿಕ ಸೌಲಭ್ಯ ನೀಡಲು ಗುರುತಿಸಲಾಗಿದೆಯಲ್ಲದೆ ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆಯಡಿ ಕೋವಿಡ್ ಸೋಂಕಿನಿಂದ ಪೋಷಕರಿಬ್ಬರನ್ನು ಕಳೆದುಕೊಂಡು ಅನಾಥರಾಗಿರುವ 8 ಮಕ್ಕಳಿಗೆ ತಲಾ 3 ಲಕ್ಷಗಳಂತೆ ಆಥರ್ಿಕ ಸೌಲಭ್ಯಗಳನ್ನು ನೀಡಲಾಗಿದೆ ಎಂದು ವಿವರಿಸಿದರು.

ಮುಂದುವರಿದು ದತ್ತು ಕಾರ್ಯಕ್ರಮದ ಪ್ರಗತಿಯ ಮಾಹಿತಿ ನೀಡಿ ಏಪ್ರಿಲ್ 2021 ರಿಂದ ಈವರೆಗೂ ಸಂಸ್ಥೆಗೆ 37 ಮಕ್ಕಳು ದಾಖಲಾಗಿದ್ದು ಅವರಲ್ಲಿ 26 ಮಕ್ಕಳನ್ನು ದತ್ತು ನೀಡಲಾಗಿದೆ ಎಂದರಲ್ಲದೇ ಪ್ರಸ್ತುತ ದತ್ತು ಕೇಂದ್ರದಲ್ಲಿ 17 ಮಕ್ಕಳು ಇದ್ದು ಅವರಲ್ಲಿ 11 ಮಕ್ಕಳು ದತ್ತು ನೀಡಲು ಅರ್ಹರಿರುವ ಬಗ್ಗೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ|| ರಾಘವೇಂದ್ರ ಶೆಟ್ಟಿಗಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಶ್ರೀಧರ್, ಜಿಲ್ಲಾ ಆರ್ಸಿಹೆಚ್. ಅಧಿಕಾರಿ ಡಾ.ಕೇಶವ್ ರಾಜ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?