Friday, March 29, 2024
Google search engine
Homeತುಮಕೂರು ಲೈವ್Republic day ಸಂಭ್ರಮ

Republic day ಸಂಭ್ರಮ

Tumkuru: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತುಮಕೂರಿನ ಕನ್ನಡ ಭವನದಲ್ಲಿ 71ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.

ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ದಿನದಷ್ಟೇ ಮಹತ್ವಪೂರ್ಣವಾದ್ದದ್ದು ಗಣರಾಜ್ಯೋತ್ಸವ. ಈ ಸಂದರ್ಭದಲ್ಲಿ ಪ್ರಜಾತಂತ್ರ ಗಣತಂತ್ರದ ಜಾತ್ಯತೀಲ ಮೌಲ್ಯಗಳನ್ನು ಒಳಗೊಂಡ ನಮ್ಮ ಸಂವಿಧಾನವನ್ನು ಅಳವಡಿಸಿಕೊಂಡ ದಿನ ಜ.26 ಅತ್ಯಂತ ಮಹತ್ವದ ದಿನ ಎಂದರು.

ಬಹುತ್ವದಲ್ಲಿ ಏಕತೆಯನ್ನು ಸಾರುವ ರಾಷ್ಟ್ರೀಯ ಭಾವೈಕ್ಯತೆಯನ್ನು ಹೊಂದಿರುವ ವಿಶ್ವ ಭ್ರಾತೃತ್ವವನ್ನು ಸಾರುವ ಸಂವಿಧಾನವನ್ನು ಅರ್ಥೈಸಿಕೊಳ್ಳುವುದು ಇಂದೆಂದಿಗಿಂತಲೂ ಅಗತ್ಯವಾಗಿದೆ. ಏಕೆಂದರೆ ಗಣತಂತ್ರ ವ್ಯವಸ್ಥೆಯನ್ನು ರಣತಂತ್ರಗೊಳಿಸುವ ಶಕ್ತಿಗಳು ಹೆಚ್ಚಾಗುತ್ತಿವೆ.

ರಾಷ್ಟ್ರೀಯತೆಯ ಅಪವ್ಯಾಖ್ಯಾನಗಳು ವಿಜೃಂಭಿಸುತ್ತಿವೆ. ನಿಜವಾದ ರಾಷ್ಟ್ರೀಯತೆಯನ್ನು ಮರೆಮಾಚಿ ಸ್ಥಾಪಿತ ಮೌಲ್ಯಗಳನ್ನು ಪ್ರತಿಪಾದಿಸುವ ಹುನ್ನಾರಗಳು ನಡೆಯುತ್ತಿವೆ. ಪ್ರತಿಯೊಬ್ಬರೂ ಸಂವಿಧಾನದ ಮೂಲ ಆಶಯವನ್ನು ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಜಾತ್ಯತೀತ ಮೌಲ್ಯಗಳನ್ನು ದಿಕ್ಕರಿಸಿ ಮೂಲಭೂತವಾದವನ್ನು ಎತ್ತಿಹಿಡಿಯುವ ಅಪಾಯಕಾರಿ ಸಂಗತಿಗಳು ಘಟಿಸುತ್ತಿವೆ.

ಸಂವಿಧಾನದ ಆಶಯಕ್ಕೆ ವಿರುದ್ದವಾದ ಪ್ರಯತ್ನಗಳು ನಡೆಯುತ್ತಿವೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕತಿಗಳ ಭಾರತದಲ್ಲಿ ಪ್ರತಿಯೊಬ್ಬ ಭಾರತೀಯರೂ ಕೂಡ ಸಮಾನರು ಎಂದು ಸಂವಿಧಾನ ಹೇಳಿದೆ. ಆದ್ದರಿಂದ ಭಾರತ ಸಂವಿಧಾನವೇ ಸರ್ವ ಶ್ರೇಷ್ಠವಾಗಿದೆ. ಇಂತ್ಯ ಅತ್ಯಮೂಲ್ಯ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರನ್ನುಇಂದು ಸ್ಮರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕೋಶಾಧ್ಯಕ್ಷ ಬಿ.ಮರುಳಯ್ಯ, ಕಾರ್ಯದರ್ಶಿ ಗೋವಿಂದಯ್ಯ ದ್ವಾರನಕುಂಟೆ, ನಿರ್ದೇಶಕ ಲಕ್ಷ್ಮೀಕಾಂತರಾಜೇ ಅರಸ್ ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?