ತುಮಕೂರ್ ಲೈವ್

ಉತ್ತಮ ಫಲಿತಾಂಶಕ್ಕೆ ಹೀಗೆ ಮಾಡಿ

ಉತ್ತಮ ಫಲಿತಾಂಶಕ್ಕಾಗಿ ವಿಶೇಷ ತರಗತಿ
ತುಮಕೂರು:ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸುವ ಸಂಬಂಧ ವಿದ್ಯಾಭ್ಯಾಸದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಸಂಜೆ ವೇಳೆ ವಿಶೇಷ ತರಗತಿ ನಡೆಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಸೂಚಿಸಿದರು.
ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಶುಭ ಕಲ್ಯಾಣ್, ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಹೀಗಾಗಿ ಈಗಿನಿಂದಲೇ ಮಕ್ಕಳಿಗೆ ಪರೀಕ್ಷಾ ಸಿದ್ಧತೆ ನಡೆಸಬೇಕು ಎಂದು ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕರಿಗೆ ಸೂಚಿಸಿದರು.
ತಾಲ್ಲೂಕಿನಲ್ಲಿ ಕೈಗೆತ್ತಿಕೊಂಡಿರುವ 21 ಸರ್ಕಾರಿ ಶಾಲಾ ಕಟ್ಟಡಗಳ ಮರು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇದನ್ನು ಪರಿಶೀಲಿಸಿ ಪೂರ್ಣಗೊಳಿಸಬೇಕು ಎಂದರು.
ತಾಲೂಕಿನಲ್ಲಿ ಉತ್ತಮ ಮಳೆ ಬರುತ್ತಿದ್ದು, ಈಗಾಗಲೇ ತುಂಬಿರುವ ಕೆರೆಗಳಿಗೆ ಮೀನಿನ ಮರಿಗಳನ್ನು ನಿಯಮಾನುಸಾರ ಬಿಡಲು ಅಗತ್ಯ ಕ್ರಮವಹಿಸುವಂತೆ ಮೀನುಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ನರೇಗಾ ಯೋಜನೆಯಡಿ ಶೇಕಡ 68ರಷ್ಟು ಪ್ರಗತಿ ಸಾಧಿಸಿದೆ. ಮಾರ್ಚ್ ಅಂತ್ಯದೊಳಗೆ ಶೇಕಡಾ 100ರಷ್ಟು ಭೌತಿಕ ಗುರಿ ಸಾಧಿಸಲು ಕ್ರಮವಹಿಸಬೇಕೆಂದು ಪಿಡಿಓಗಳಿಗೆ ತಿಳಿಸಿದರು.

Comment here