Saturday, April 13, 2024
Google search engine
Homeತುಮಕೂರು ಲೈವ್ಶ್ರೀ ಪದ್ಧತಿ: ಸಿ.ಎಸ್.ಪುರ ರೈತ ಉತ್ಪಾದಕಾ ಕಂಪನೆ ಸಾಧನೆ

ಶ್ರೀ ಪದ್ಧತಿ: ಸಿ.ಎಸ್.ಪುರ ರೈತ ಉತ್ಪಾದಕಾ ಕಂಪನೆ ಸಾಧನೆ

Publicstory


ಗುಬ್ಬಿ : ಹೆಚ್ಚು ಇಳುವರಿಯನ್ನು ಪಡೆಯುವುದಕ್ಕೆ ರೈತರು ಲಘು ಪೋಷಕಾಂಶಗಳನ್ನು ತೋಟಗಾರಿಕೆ ಬೆಳೆಗಳಿಗೆ ಒದಗಿಸಬೇಕು ಎಂದು ಕ್ರಿಯಾಜನ್ ಸಂಸ್ಥೆ ತಾಂತ್ರಿಕ ಸಲಹೆಗಾರರ ಸುನಿಲ್‌ಕುಮಾರ್ ತಿಳಿಸಿದರು.

ತಾಲ್ಲೂಕಿನ ಸಿಎಸ್ ಪುರ ಹೋಬಳಿ ಬುಕ್ಕಸಾಗರ ಸೋಮಶೇಖರ್ ರವರು ಜಮೀನಿನಲ್ಲಿ ಇನಿಶಿಯೇಟಿವ್ ಫಾರ್ ಡೆವಲಪ್‌ಮೆಂಟ್ ಫೌಂಡೇಶನ್, ಸಿಎಸ್ ಪುರ ರೈತ ಉತ್ಪಾದಕರ ಕಂಪನಿಯ ಆಶ್ರಯದಲ್ಲಿ ಶ್ರೀಪದ್ದತಿಯಲ್ಲಿ ಬೆಳೆದ ಭತ್ತ ಬೆಳೆಯ ಕ್ಷೇತ್ರೋತ್ಸವದಲ್ಲಿ ಮಾತನಾಡಿದ ಅವರು, ಮಣ್ಣಿನಲ್ಲಿ ಸೂಕ್ಷಾö್ಮಣುಗಳನ್ನು ಹೆಚ್ಚಿಸಿಕೊಳ್ಳಲು ಸಾವಯವ ಗೊಬ್ಬರವನ್ನು ಬಳಸಲು ರೈತರು ಮುಂದಾಗಬೇಕು. ತೋಟಗಾರಿಕೆ ಬೆಳೆಗಳಿಗೆ ಗೊಬ್ಬರಗಳನ್ನು ನೀಡುವಾಗ ಮಣ್ಣನ್ನು ಪರೀಕ್ಷೆ ಮಾಡಿಸಿ ಗೊಬ್ಬರ ನೀಡಬೇಕು ಎಂದು ತಿಳಿಸಿದರು.

ಪ್ರಗತಿಪರ ರೈತ ಸೋಮಶೇಖರ್ ಮಾತನಾಡಿ, ರೈತರು ಸುಸ್ಥಿರ ಕೃಷಿ ಮಾಡುವ ಮೂಲಕ ವ್ಯವಸಾಯದಲ್ಲಿ ಖರ್ಚನ್ನು ಕಡಿಮೆ ಮಾಡಿಕೊಂಡು ಹೆಚ್ಚು ಆದಾಯ ಪಡೆಯುವಲ್ಲಿ ಜಾಗೃತರಾಗಬೇಕು ಎಂದರು.
ಕ್ಷೇತ್ರೋತ್ಸವದಲ್ಲಿ ಸಿಎಸ್ ಪುರ ರೈತ ಉತ್ಪಾದಕರ ಕಂಪನಿಯ ಸಿಇಒ ಲೋಕೇಶ.ಡಿ, ಮಾರುಕಟ್ಟೆ ಅಧಿಕಾರಿ ವಿನೋಧಮ್ಮ, ಕ್ರಿಯಾಜನ್ ಕಂಪನಿಯ ಕಿರಣ್.ಎಸ್.ಇ, ಲೆಕ್ಕಾಧಿಕಾರಿ ಶ್ರೀಕಾಂತ್, ಬಿಸಿಎ ನಳಿನ, ಗಂಗಮ್ಮ, ರೈತರಾದ ನಂಜುAಡಯ್ಯ, ರೂಪ ಮತ್ತಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?