Thursday, April 11, 2024
Google search engine
Homeತುಮಕೂರು ಲೈವ್ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ: ತಿಮ್ಮರಾಯಪ್ಪ

ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ: ತಿಮ್ಮರಾಯಪ್ಪ

ಪಾವಗಡ: ಪ್ರತಿಯೊಬ್ಬರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲ ಸಲ್ಲದ ತಪ್ಪು ಮಾತಗಳನ್ನು ಕೇಳಿ ಲಸಿಕೆ ಹಾಕಿಸಿಕೊಳ್ಳದೆ ಇರಬಾರದು. ಲಸಿಕೆ ಹಾಕಿಸಿಕೊಂಡಲ್ಲಿ ಕೋವಿಡ್ 19 ನಿಯಂತ್ರಿಸಲು ಸಹಾಯವಾಗುತ್ತದೆ. ಗ್ರಾಮಗಳಿಗೆ ಬಂದಾಗ ಜನತೆ ಅಧಿಕಾರಿಗಳಿಗೆ ಸಹಕಾರ ನೀಡಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಲಸಿಕೆ ಹಾಕಿಸಿಕೊಳ್ಳುವುದರ ಜೊತೆಗೆ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಮುಂದುವರೆಸಬೇಕು. ಕೋವಿಡ್ 19 3 ನೇ ಅಲೆ ಬರುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸುತ್ತಿರುವುದು ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಹೀಗಾಗಿ ಈಗಿನಿಂದಲೆ ಆಸ್ಪತ್ರೆಗಳಲ್ಲಿ ಅಗತ್ಯ ಸಿದ್ದತೆ ನಡೆಸಬೇಕು. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಲ್ಲಿ 2 ನೇ ಅಲೆಯಲ್ಲಿ ಆದಂತಹ ಅನಾಹುತತಡೆಯಬಹುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾದುಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿ ಅಗಯ್ಯ ಸಲಹೆ ಸೂಚನೆ ನೀಡಿ ತಾಲ್ಲೂಕಿನಲ್ಲಿ ಕೋವಿಡ್ 19 ನಿಯಂತ್ರಿಸಲು ಶ್ರಮಿಸಿದ್ದಾರೆ. ಅವರಿಗೆ ಜನತೆ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸಾರವಾಟಪುರ ಗೋವಿಂದಬಾಬು, ಅಲ್ಪ ಸಂಖ್ಯಾತ ಮುಖಂಡ ಯೂನುಸ್, ನಾಗೇಂದ್ರ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?