Thursday, March 28, 2024
Google search engine
Homeತುಮಕೂರು ಲೈವ್Tumkuru: ಫುಡ್ ಪಾರ್ಕ್ ವಶಕ್ಕೆ ಕೋಡಿಹಳ್ಳಿ ಜಗದೀಶ್ ಒತ್ತಾಯ

Tumkuru: ಫುಡ್ ಪಾರ್ಕ್ ವಶಕ್ಕೆ ಕೋಡಿಹಳ್ಳಿ ಜಗದೀಶ್ ಒತ್ತಾಯ

Publicstory. in


Tumkuru: ಲಾಕ್ ಡೌನ್ ಪರಿಣಾಮ ಜಿಲ್ಲೆಯ ರೈತರ ಕೋಟ್ಯಂತರ ಮೌಲ್ಯದ ಆಹಾರ ಬೆಳೆಗಳು ಹೊಲ, ತೋಟಗಳಲ್ಲೇ ಹಾಳಾಗುತ್ತಿದ್ದು, ಜಿಲ್ಲಾಡಳಿತ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಭಾರತೀಯ ಕೃಷಿಕ ಸಮಾಜದ ಜಗದೀಶ್ ಕೋಡಿಹಳ್ಳಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ್, ಕೃಷಿ ಸಚಿವ, ಜಿಲ್ಲಾಧಿಕಾರಿ ಅವರನ್ನು ಒತ್ತಾಯಿಸಿರುವ ಅವರು, ಕೂಡಲೇ ತುಮಕೂರು ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಫುಡ್ ಪಾರ್ಕ್ ಅನ್ನು ಸರ್ಕಾರದ ವಶಕ್ಕೆ ಪಡೆಯಬೇಕು.‌ ಇಲ್ಲಿನ ಶೀತಲೀಕರಣದ ಗೋದಾಮಿನಲ್ಲಿ ರೈತರು ಬೆಳೆಗಳನ್ನು ಕೂಡಲೇ ದಾಸ್ತಾನು ಮಾಡಲು ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪುಡ್ ಪಾರ್ಕ್ ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗಿದೆ. ಇದಕ್ಕೆ ಸರ್ಕಾರದ ಬಂಡವಾಳವೂ ಸೇರಿದೆ. ಜಿಲ್ಲೆಯಲ್ಲಿ ಬೆಳೆದಿರುವ ಹಣ್ಣು, ತರಕಾರಿಗಳನ್ನು ಇಲ್ಲಿ ಸಂಗ್ರಹ ಮಾಡುವಷ್ಟು ಜಾಗ ಇದೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ಅವರು ಕೂಡಲೇ ಎಲ್ಲ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ಸಭೆ ಕರೆದು ಒಂದೇ ದಿನದಲ್ಲಿ ರೈತರ ಪಟ್ಟಿಯನ್ನು ತಯಾರಿಸಬೇಕು.‌ರೈತರ ಹೊಲಗಳಿಗೆ ಸರ್ಕಾರಿ ಬಸ್ ಗಳನ್ನು ಕಳುಹಿಸಿ ಉತ್ಪನ್ನಗಳನ್ನು ಸಂಗ್ರಹಿಸಿ ಅದನ್ನು ಪುಡ್ ಪಾರ್ಕ್ ನ ಗೋದಾಮಿನಲ್ಲಿ ಸಂಗ್ರಹಿಸಿ, ಮಾರಾಟ ಮಾಡುವ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ತಾತ್ಕಾಲಿಕವಾಗಿ ಫುಡ್‌ ಪಾರ್ಕ್ ವಶಕ್ಕೆ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯ ನಡುವೆ ಸಂಪರ್ಕ ಕಡಿತಗೊಂಡಿದ್ದರಿಂದ ದಿನಸಿ ಪದಾರ್ಥಗಳು ಪೂರೈಕೆಯಾಗುತ್ತಿಲ್ಲ. ಜನರಿಗೆ ಅಗತ್ಯವಾದ ಆಹಾರ ಪದಾರ್ಥಗಳು ಅಡಿಗೆಗೆ ಬೇಕಾಗುವ ಬೇಳೆಕಾಳು ಹುರುಳಿಕಾಳು ಅಡುಗೆ, ಎಣ್ಣೆ ಆಗಿರಬಹುದು ಮತ್ತಿತರ ಪದಾರ್ಥಗಳು ಅಭಾವ ಕಂಡು ಬರ್ತಾಯಿದೆ. ಜಿಲ್ಲೆಯಲ್ಲಿ ಇನ್ನೆರಡು ಮೂರು ದಿನಗಳಲ್ಲಿ ದಿನಸಿ ಪದಾರ್ಥಗಳು ಪೂರೈಕೆಯಾಗದೆ ಇದ್ದರೆ ಜನರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಲಾಕ್ಡೌನ್ ಪರಿಣಾಮವಾಗಿ ರೈತರು ಬೆಳೆದ ಬೆಳೆಗಳನ್ನು ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ತರಲು ರೈತರಿಗೆ ಪೊಲೀಸರು ರೈತರ ಉತ್ಪನ್ನಗಳನ್ನು ತುಂಬಿರುವ ವಾಹನಗಳನ್ನು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಲಾಕ್ಡೌನ್ ಪರಿಣಾಮವಾಗಿ ರೈತರು ಬೆಳೆದಂತಹ ಶಿರಾ ತಾಲೂಕಲ್ಲಿ ಮೂರು ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಕರ್ಬುಜ ಹಣ್ಣನ್ನು ಸುಮಾರು 25ರಿಂದ 30 ಟನ್ ಕೆರೆಗೆ ಸುರಿದಿದ್ದಾರೆ. ಇದರಿಂದ ಸುಮಾರು ನಾಲ್ಕು ಲಕ್ಷದಷ್ಟು ನಷ್ಟ ಸಂಭವಿಸಿದೆ.ಮತ್ತೊಂದೆಡೆ ಟೊಮೇಟೊವನ್ನು ರಸ್ತೆಬದಿಯಲ್ಲಿ ಲೋಡ್ ಗಟ್ಟಲೆ ಸುರಿದು ಹೋಗಿರುತ್ತಾರೆ. ರೈತರು ಬೆಳೆದಂತಹ ಉತ್ಪನ್ನಗಳನ್ನು ಮಾರಾಟ ಮಾಡಲಾಗಿದೆ ಕಣ್ಣೀರು ಹಾಕುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ರೈತರೇ ನಗರ ಜನರ‌ ಮನೆ ಬಾಗಿಲಿಗೆ ಟ್ರ್ಯಾಕ್ಟರ್, ಮತ್ತಿತರ ವಾಹನಗಳಲ್ಲಿ ತುಂಬಿಕೊಂಡು ಮಾರಾಟ ಮಾಡಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?