Thursday, March 28, 2024
Google search engine
Homeತುಮಕೂರು ಲೈವ್ಅತ್ಯಚಾರಿಗೆ 12 ವರ್ಷ ಸೆರೆವಾಸ

ಅತ್ಯಚಾರಿಗೆ 12 ವರ್ಷ ಸೆರೆವಾಸ

ತುಮಕೂರು:
ಅಂಗವಿಕಲ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭವತಿಯಾಗಲು ಕಾರಣನಾಗಿದ್ದ ಆರೋಪಿಗೆ ತುಮಕೂರು ಜಿಲ್ಲಾ ಅಧಿಕ ಸತ್ರನ್ಯಾಯಾಲಯ 12 ವರ್ಷ ಕಠಿಣ ಶಿಕ್ಷೆ ನೀಡಿ ತೀರ್ಪು ನೀಡಿದೆ.


ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೊರಟಗೆರೆ ಟೌನ್  ಕುಂಭಾರ ಬೀದಿ ಲೇಟ್ ಪುಟ್ಟಣ್ಣ ಎಂಬುವರ ಮಗ ಕೆ.ಪಿ. ಪ್ರಕಾಶ(35) ಶಿಕ್ಷೆಗೊಳಗಾದ ವ್ಯಕ್ತಿ.ಪ್ರಕಾಶ ತಮ್ಮ ಬೀದಿಯಲ್ಲೆ ವಾಸವಿಗಿದ್ದ 16 ವರ್ಷದ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಾವತಿಯಾಗಲು ಕಾರಣನಾಗಿದ್ದ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಪೋಷಕರು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋದಾಗ ತಪಾಸಣೆ ನಡೆಸಿದ ಆಸ್ಪತ್ರೆ ವೈದ್ಯರು ಬಾಲಕಿ ಗರ್ಭವತಿಯಾಗಿರುವುದನ್ನು ದೃಡಪಡಿಸಿಕೊಂಡು ಸ್ಥಳಿಯ ಮಹಿಳಾ ಮತ್ತು  ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶಮಂತಕ ಅವರು ಡಿಸೆಂಬರ್ 12, 2018ರಲ್ಲಿ ಸಂತ್ರಸ್ಥೆ ಪರವಾಗಿ ಕೊರಟಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೇಸು ದಾಖಲಿಸಿಕೊಂಡ ಕೊರಟಗೆರೆ ಪೊಲೀಸ್ ಠಾಣಾ ಸಿಪಿಐ ಎಫ್.ಕೆ. ನದಾಫ್ ಅವರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಾಲಕಿ ಮೇಲೆ ಒಂದು ವರ್ಷಗಳ ನಿರಂತರ ಆತ್ಯಾಚಾರ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪ್ರಕಾಶನ ವಿರುದ್ಧ ನಧಾಫ್ ಅವರು ನ್ಯಾಯಾಲಯಕ್ಕೆ ದೋಶಾರೋಪ ಪಟ್ಟಿ ಸಲ್ಲಿಸಿದ್ದರು.

ವಾದ ವಿವಾದ ಆಲಿಸಿದ ತುಮಕೂರು ಜಿಲ್ಲಾ ಅಧಿಕ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಆರೋಪಿ ಪ್ರಕಾಶನಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ, 5 ಸಾವಿರ ದಂಡ ವಿದಿಸಿ ತೀರ್ಪು ನೀಡಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ 3 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ವಿದಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ವಿಶೇಷ ಅಭಿಯೋಜಕಿ ಗಾಯಿತ್ರಿರಾಜು ಸಂತ್ರಸ್ತೆ ಪರ ವಾದ ಮಂಡಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?