Saturday, April 20, 2024
Google search engine
Homeತುಮಕೂರು ಲೈವ್ಅಧಿಕಾರಿಗಳ ಸಭೆ ನಡೆಸಿದ ಸಂಸದರು...

ಅಧಿಕಾರಿಗಳ ಸಭೆ ನಡೆಸಿದ ಸಂಸದರು…

Tumkuru: ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕಾಮಗಾರಿಗಳನ್ನು ಕಾಲಬದ್ಧ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಜಿಲ್ಲೆಯ 330 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ತ್ರೀ ಶಕ್ತಿ ಸಂಘಗಳು, ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಮಾರ್ಚ್ 31ರೊಳಗಾಗಿ ಇನ್ನೂ 1 ಲಕ್ಷ ಕಾರ್ಡ್‍ಗಳನ್ನು ವಿತರಿಸಬೇಕೆಂದು ಡಿಹೆಚ್‍ಒ ಅವರಿಗೆ ಸೂಚಿಸಿದರು.

ಪೈಲೆಟ್ ಯೋಜನೆಯ ಬಗ್ಗೆ ಮಾಹಿತಿ ಕೇಳಿದ ಸಂಸದರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೊತೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಹಾಗೂ ಹೇಮಾವತಿ ಈ ಮೂರು ನದಿಗಳ ನೀರನ್ನು ಬಳಸಿಕೊಂಡು ಊರಿಗೊಂದು ಕೆರೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸಬೇಕೆಂದು ಸಂಸದರು ಅಧಿಕಾರಿಗಳಿಗೆ ತಿಳಿಸಿದರು.

ಇನ್ನು ಹತ್ತು ದಿನದೊಳಗಾಗಿ ಸಾಲ ಸೌಲಭ್ಯ ಮಂಜೂರಾತಿ ಬಗ್ಗೆ ನಿಖರವಾದ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಸರ್ವ ಶಿಕ್ಷಣ ಅಭಿಯಾನ ಕುರಿತು ಮಾಹಿತಿ ಕೇಳಿದ ಸಂಸದರು ಉತ್ತಮ ಗುಣಮಟ್ಟದ ಶಿಕ್ಷಣ, ಕಟ್ಟಡಗಳು ಇಲ್ಲದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸದೆ, ದುಬಾರಿ ದಂಡ ತೆತ್ತು ಖಾಸಗಿ ಶಾಲೆಗಳಿಗೆ ಪೋಷಕರು ಸೇರಿಸುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಂತಾಗಬೇಕು ಹಾಗೂ ದುರಸ್ಥಿಯಲ್ಲಿರುವ ಕಟ್ಟಡಗಳನ್ನು ಕೇಂದ್ರ ಮತ್ತು ರಾಜ್ಯ ಸರ್ವ ಶಿಕ್ಷಣ ಅಭಿಯಾನದಡಿ ಹಣ ಪಡೆದು ದುರಸ್ಥಿಗೊಳಿಸುವಂತೆ ತುಮಕೂರು ಹಾಗೂ ಮಧುಗಿರಿ ಉಪನಿರ್ದೇಶಕರುಗಳಿಗೆ ಸೂಚನೆ ನೀಡಿದರು..

ಹೊಸ ಸಿಲೆಬಸ್ ಪ್ರಕಾರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರುಗಳಾದ ರೇವಣ ಸಿದ್ಧಪ್ಪ ಮತ್ತು ಎಂ.ಆರ್.ಕಾಮಾಕ್ಷಿ ಅವರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಆ ಕೆರೆಗಳ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು. ಪಶ್ಚಿಮ ದಿಕ್ಕಿಗೆ ಹರಿದು ವ್ಯರ್ಥವಾಗಿ ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಡೈವರ್ಶನ್ ಮೂಲಕ ಕೆರೆಗಳನ್ನು ತುಂಬಿಸುವ ಯೋಜನೆ ಆಧ್ಯತೆಯ ಮೇಲೆ ಕೈಗೆತ್ತಿಕೊಳ್ಳಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು. ಈ ಯೋಜನಾ ವರದಿಯನ್ನು ಜಿಲ್ಲಾಡಳಿತದ ಮೂಲಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲು ಅವರು ಸೂಚಿಸಿದರು.

ರೈಲ್ವೇ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ಪ್ರಗತಿಯ ವಿವರವಾದ ಮಾಹಿತಿಯನ್ನು ತೆಗೆದುಕೊಂಡು ಮುಂದಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಭಾಗವಹಿಸುವಂತೆ ತಿಳಿಸಿದರು.

ಸಾಮಾಜಿಕ ಅರಣ್ಯ ಯೋಜನೆ ಅಡಿಯಲ್ಲಿ ಬೆಳೆಸಲಾಗಿರುವ ಸಸಿಗಳ ಮಾಹಿತಿ ಪಡೆದ ಸಂಸದರು ರೈತರಿಗೆ ಉಪಯುಕ್ತವಾಗುವ ಸಸಿಗಳನ್ನು ನರ್ಸರಿಗಳಲ್ಲಿ ಬೆಳೆಸಿ ಸೂಕ್ತ ಸಮಯದಲ್ಲಿ ವಿತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಗತಿ ಕಡಿಮೆ ಸಾಧಿಸಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಮುಂದಿನ ಸಭೆಯಲ್ಲಿ ಯಾವುದೇ ಸಬೂಬು ಹೇಳದೇ ನಿಗಧಿತ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಸದರು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?