ತುಮಕೂರು ಲೈವ್

ಅಪಘಾತ: ಯುವತಿ ಸಾವು

Tumkur: ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಹಿಂಬದಿ ಸವಾರ ಯುವತಿಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಪುರವರ ಗ್ರಾಮದ ರಾಜಣ್ಣ ಎಂಬುವರ ಪುತ್ರಿ ಅರುಂಧತಿ (18) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪಟ್ಟಣದ ಬೆಂಕಿಪುರದ ಕಿಶೋರ್ (22) ಗಾಯಗೊಂಡಿದ್ದು ಆಸ್ಪತ್ರೆ ದಾಖಲಿಸಲಾಗಿದೆ.

ಕಿಶೋರ್ ಮತ್ತು ಅರುಂಧತಿ ದ್ವಿಚಕ್ರವಾಹನದಲ್ಲಿ ಮಧುಗಿರಿಯಿಂದ ತೆರಳುತ್ತಿದ್ದಾಗ, ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.

ದ್ವಿಚಕ್ರ ವಾಹನ ಸವಾರ ಕಿಶೋರ್ ಗೆ ಹೆಚ್ಚಿನ ಚಿಕಿತ್ಸೆ ಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comment here