Friday, March 29, 2024
Google search engine
Homeತುಮಕೂರು ಲೈವ್ಅಬ್ಬಬ್ಬಾ ಇವರ ಆಟ ನೋಡಿ ಖುಷಿಪಟ್ಟರು.....

ಅಬ್ಬಬ್ಬಾ ಇವರ ಆಟ ನೋಡಿ ಖುಷಿಪಟ್ಟರು…..

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಜಿ.ಪಂ ಸದಸ್ಯ ಚೌಡಪ್ಪ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.

ಮಧುಗಿರಿ : ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಯೋಚಿಸದೆ ಕ್ರೀಡಾಮನೋಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ಜಿ.ಪಂ ಸದಸ್ಯ ಹೆಚ್.ಕೆಂಚಮಾರಯ್ಯ ತಿಳಿಸಿದರು.

ಪಟ್ಟಣದ ರಾಜೀವ್‍ಗಾಂಧಿ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು.

ವಿಶೇಷ ಚೇತನರು ನಾವು ಯಾವುದಕ್ಕೂ ಕಡಿಮೆ ಇಲ್ಲ ಎಂಬ ಮನಸ್ಥಿತಿಯನ್ನು ಹೊಂದಬೇಕು. ವಿಶೇಷ ಚೇತನರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದ ಅವರು ಸರ್ಕಾರ ನೀಡುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿ.ಪಂ ಸದಸ್ಯ ಕೊಂಡವಾಡಿ ತಿಮ್ಮಯ್ಯ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಎಲ್ಲ ಉಳ್ಳವರು ಸೋಮಾರಿಗಳಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿ ವಿಶೇಷ ಚೇತನರು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಸಂತಸ ತಂದಿದೆ ಎಂದರು.

ಉಪನಿರ್ದೆಶಕ ರೇವಣ್ಣ ಸಿದ್ದಪ್ಪ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯ ವೃದ್ದಿಯಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 34 ಜಿಲ್ಲೆಗಳಿಂದ 510 ಬಾಲಕರು ಹಾಗೂ 410 ಬಾಲಕೀಯರು ಭಾಗವಹಿಸಿದ್ದಾರೆ. ಈ ಎಲ್ಲಾ ಮಕ್ಕಳಿಗೂ ಊಟ, ವಸತಿ ಹಾಗೂ ವಾಹನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ವ್ಯವಸ್ಥಾಪಕರಿಗೆ ಸೂಚಿಸಿದರು.

ಜಿ.ಪಂ ಸದಸ್ಯ ಚೌಡಪ್ಪ, ಬಿ.ಇ.ಒ ರಂಗಪ್ಪ, ಡಿವೈಪಿಸಿ ರಾಜಕುಮಾರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೆಶಯ್ಯ, ಜಿಲ್ಲಾ ಪ್ರೌಡಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಂ.ವೆಂಕಟರಾಮು, ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟಾರಂಗಾರೆಡ್ಡಿ, ಕಾರ್ಯದರ್ಶಿ ಸಂಜಯ್, ದೈಹಿಕ ಶಿಕ್ಷಣಾಧಿಕಾರಿಗಳಾದ ಹನುಮಂತರಾಯಪ್ಪ, ಸತ್ಯನಾರಾಯಣ್, ನಾಗರಾಜು, ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?