ತುಮಕೂರ್ ಲೈವ್

ಐಡಿ‌‌ ಹಳ್ಳಿಗೆ‌ ಬರಲಿದೆ ಡಿಸಿಸಿ‌ ಬ್ಯಾಂಕ್ ಶಾಖೆ

ಮಧುಗಿರಿ ಪಟ್ಟಣದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾಜಿ ಜಿ.ಪಂ.ಉಪಾದ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ ಮಾತನಾಡಿದರು.

Publicstory.in


ಮಧುಗಿರಿ: ತಾಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 8 ರಂದು ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್‍ನ ನೂತನ ಶಾಖೆಯನ್ನು ಲೋಕಸಭಾ ಸದಸ್ಯ ಬಸವರಾಜು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಜಿ.ಪಂ.ಉಪಾದ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ ತಿಳಿಸಿದರು.

ಪಟ್ಟಣದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್.ಗಂಗಣ್ಣ. ಲಾಕರ್ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಜೆ.ರಾಜಣ್ಣ, ಗಣಕೀಕರಣ ಉದ್ಘಾಟನೆಯನ್ನು ತುಮಕೂರು ಬ್ಯಾಂಕ್‍ನ ನಿರ್ದೇಶಕ ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷ ಆರ್.ರಾಜೇಂದ್ರ, ವ್ಯವಸ್ಥಾಪಕರ ಕೊಠಡಿ ಉದ್ಘಾಟನೆಯನ್ನು ಸಹಕಾರ ಸಂಘಗಳ ಉಪನಿಬಂಧಕ ಆರ್.ಜೆ.ಕಾಂತರಾಜು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು, ಮುಖಂಡರುಗಳು ಹಾಗೂ ಸಾರ್ವಜನಿಕರು ಕೆ ಎನ್ ಆರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸದಸ್ಯ ಜಿ.ಜೆ.ರಾಜಣ್ಣ, ತಾ.ಪಂ.ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ತುಮುಲ್ ಮಾಜಿ ಅಧ್ಯಕ್ಷ ನಾಗೇಶ್‍ಬಾಬು,ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ರಾಮಕೃಷ್ಣಪ್ಪ, ಮುಖಂಡರುಗಳಾದ ಶನಿವಾರಂ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ಮಾಜಿ ಗ್ರಾಪಂ ಅಧ್ಯಕ್ಷ ಸದಾಶಿವರೆಡ್ಡಿ, ಕೇಶವ ರೆಡ್ಡಿ, ಪಿ.ಸಿ.ಕೃಷ್ಣರೆಡ್ಡಿ, ಸೀತಾರಾಂ, ಗರಣಿ ರಾಮಾಂಜಿ, ಡಿ.ಟಿ.ಸಂಜೀವ್ ಮೂರ್ತಿ ಹಾಜರಿದ್ದರು.

Comment here