Friday, March 29, 2024
Google search engine
Homeತುಮಕೂರು ಲೈವ್ಕೊರೊನಾ ಭೀತಿ: 212 ಮಂದಿ ಮೇಲೆ ನಿಗಾ: ತುಮಕೂರಿನಲ್ಲಿ ನಿಷೇಧಾಜ್ಞೆ ಜಾರಿ

ಕೊರೊನಾ ಭೀತಿ: 212 ಮಂದಿ ಮೇಲೆ ನಿಗಾ: ತುಮಕೂರಿನಲ್ಲಿ ನಿಷೇಧಾಜ್ಞೆ ಜಾರಿ

Publicstory. in


Tumkuru: ಕೊರೊನಾ ಭೀತಿ ಹೆಚ್ಚುತ್ತಿರುವ ಕಾರಣ ಜಿಲ್ಲೆಯಲ್ಲಿ ಸೆಕ್ಷನ್ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ರಾಖೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 20ರಿಂದ 31ರವರೆಗೂ ಈ ನಿಷೇದಾಜ್ಞೆ ಜಾರಿಯಲ್ಲಿ ಇರಲಿದೆ.

ತುಮಕೂರಿನಲ್ಲಿ ಈವರೆಗೂ ಕರೊನಾ ಪ್ರಕರಣಗಳು ದೃಢಪಟ್ಟಿಲ್ಲದಿದ್ದರೂ ಸುಮಾರು 212 ಮಂದಿ ಹೊರ ದೇಶಗಳಿಂದ ಜಿಲ್ಲೆಗೆ ಬಂದಿದ್ದಾರೆ. ಅದರಲ್ಲೂ ಕೆಲವರು ಕರೊನಾ ಪೀಡಿತ ದೇಶಗಳಿಂದ ಬಂದಿರುವ ಕಾರಣ ಜಿಲ್ಲೆಯಲ್ಲಿ ದಿನೇದಿನೇ ಆತಂಕ ಹೆಚ್ಚುತ್ತಿದೆ.

ವಿದೇಶದಿಂದ ಬಂದಿರುವ ಎಲ್ಲರ ಮೇಲೂ ಕಣ್ಗಾವಲು ಇಡಲಾಗಿದೆ. ಕೆಲವು ಶಂಕಿತರ ರಕ್ತ ಹಾಗೂ ಗಂಟಲು ದ್ರವದ ಮಾದಿರಯನ್ನು ಪರೀಕ್ಷೆಗಾಗಿ ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮದುವೆ, ಜಾತ್ರೆ, ಹಬ್ಬ ಹರಿದಿನ ಹಾಗೂ ದಿನ ನಿತ್ಯದ ಚಟುಚಟಿಕೆಗಳಲ್ಲಿ ಜನರು ಗುಂಪಾಗಿ ಸೇರಬಾರದೆಂದು ಈಗಾಗಲೇ ಸೂನಚೆ ನೀಡಿದರೂ ಈ ಸೂಚನೆಗಳನ್ನು ಜನರು ಪಾಲಿಸುತ್ತಿಲ್ಲ. ಗುಂಪು ಗುಂಪಾಗಿ ಜನರು ಸೇರುತ್ತಿದ್ದಾರೆ.

ಸರ್ಕಾರದ ಸೂಚನೆಗಳನ್ನು ಸರಿಯಾಗಿ ಕೆಲವರು ಪಾಲಿಸದೇ ಇರುವುದರಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಯವರ ಆದೇಶದಲ್ಲಿ ತಿಳಿಸಲಾಗಿದೆ.

ಅಂತ್ಯಕ್ರಿಯೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವವರಿಗೆ ಈ ನಿಷೇದಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?