Sunday, July 21, 2024
Google search engine
Homeಜಸ್ಟ್ ನ್ಯೂಸ್ಗೋವಿಂದರಾಜು ಎಂ ಕಲ್ಲೂರು ಅವರಿಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ

ಗೋವಿಂದರಾಜು ಎಂ ಕಲ್ಲೂರು ಅವರಿಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ

೨೦೨೧ ನೇ ಸಾಲಿನ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿಯು ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಎಂಬ ಕಥೆಯ ಹಸ್ತಪ್ರತಿಗೆ ದೊರೆತಿದೆ. ಹಿರಿಯ ಬರಹಗಾರರೂ ಕಥೆಗಾರರೂ ಆದ ಚೆನ್ನಪ್ಪ ಅಂಗಡಿ ಮತ್ತು ಸಿ.ಎಂ ಮುನಿಸ್ವಾಮಿ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ಈ ಪುರಸ್ಕಾರವು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ. ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ಹಾಗೂ ಶ್ರೀಮತಿ ವಿಜಯಾ ಅಗಸನಕಟ್ಟೆ ಸಹಯೋಗದಲ್ಲಿ ನಡೆವ ಸತತ ನಾಲ್ಕನೇ ವರ್ಷದ ಸ್ಪರ್ಧೆಯಿದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊರೊನಾ ನಂತರದ ಸುರಕ್ಷಿತ ದಿನಗಳಲ್ಲಿ ನೆರವೇರಿಸಲಾಗುವುದು ಎಂದು ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಥೆಗಾರನ ಪರಿಚಯ:

ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿ-೨೦೨೧, ಪಡೆದ ಗೋವಿಂದರಾಜು ಎಂ ಕಲ್ಲೂರು, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರಿನವರು. ಸದ್ಯ ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರೊ.ನಿತ್ಯಾನಂದ ಬಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ‘ನಾಡು-ನುಡಿಯ ರೂಪ : ಡಾ. ರಾಜಕುಮಾರ್ ಸಿನೆಮಾ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸುತ್ತಿದ್ದಾರೆ. ದಿ.ಮೀನಾಕುಮಾರಿ ಕಥಾ ಪ್ರಶಸ್ತಿ, ಕ್ರೈಸ್ಟ್ ಯುನಿವರ್ಸಿಟಿ, ಈ-ಹೊತ್ತಿಗೆ ಕಥಾ ಸ್ಪರ್ಧೆಗಳಲ್ಲಿ ಬಹುಮಾನ, ಬೇಂದ್ರೆ ಕವನ ಕೂಟದಿಂದ ಕವನ, ಲೇಖನ ಸ್ಪರ್ಧೆಗಳಲ್ಲಿ ಬಹುಮಾನ ಲಭಿಸಿದೆ. ಹೊಸಮನುಷ್ಯ, ಪ್ರಜಾವಾಣಿ, ಸಮಾಜಮುಖಿ, ಸಂವಾದ, ಸಂಗಾತ ಪತ್ರಿಕೆಗಳಲ್ಲಿ ಬರಹಗಳನ್ನು ಪ್ರಕಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?