Saturday, July 20, 2024
Google search engine
Homeಪೊಲಿಟಿಕಲ್ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ; ಸಚಿವ ಈಶ್ವರಪ್ಪ ಅವರಿಗೆ ಹಿನ್ನಡೆ

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ; ಸಚಿವ ಈಶ್ವರಪ್ಪ ಅವರಿಗೆ ಹಿನ್ನಡೆ

ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳಲ್ಲಿ ಅವಧಿ ಮುಗಿದಿರುವ ಹಿನ್ನೆಲೆ ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿ ನೇಮಿಸಲು ಮುಖ್ಯಮಂತ್ರಿ ಯಡಯೂರಪ್ಪ ನಿರ್ಧರಿಸಿದ್ದಾರೆ ಎಂದು ಪಕ್ಷದ ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತಿ ಪ್ರತಿನಿಧಿಗಳ ಅವಧಿ ಮುಕ್ತಾಯವಾದ ಹಿನ್ನೆಲೆ ನಂತರದ ಅವಧಿಗೆ ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪಟ್ಟು ಹಿಡಿದಿದ್ದರು.

ಆದರೆ ನಾಮ ನಿರ್ದೇಶಿತ ಸದಸ್ಯರ ನೇಮಕ ಪ್ರಜಾಪ್ರಭುತ್ವ ವಿರೋಧಿ, ಗ್ರಾಮಗಳಲ್ಲಿ ಇಂತಹ ನೇಮಕದ ಬಗ್ಗೆ ಜನತೆ ತೀವ್ರ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ನಡೆದು ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾಗುವವರೆಗೆ ಪಿಡಿಒ ಗಳನ್ನು ಆಡಳಿತಾಧಿಕಾರಿಯಾಗಿ ನೇಮಿಸಬೇಕು ಎಂದು ಮುಖ್ಯಮಂತ್ರಿ ನಿರ್ಧಿರಿಸಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟದಲ್ಲಿ ಆಡಳಿತಾಧಿಕಾರಿ ನೇಮಕ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಜನತೆಯ  ಸಚಿವ ಸಂಪುಟದಲ್ಲಿ ಕೈಗೊಳ್ಳುವ  ನಿರ್ಧರವನ್ನು ಕುತೂಹಲದಿಂದ ನಿರೀಕ್ಷಿಸುತ್ತಿದ್ದಾರೆ.

ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಪಕ್ಷದ ಪ್ರಮುಖರು, ಬಹುತೇಕ ಶಾಸಕರು, ಸಚಿವರು ಒಮ್ಮತ ಸೂಚಿಸಿದ್ದಾರೆ. ಇದರಿಂದಾಗಿ ಈಶ್ವರಪ್ಪ ಅವರಿಗೆ ತೀವ್ರ ಹಿನ್ನಡೆಯಾಗಲಿದೆ.

ಸಂಜೆ ಸಚಿವ ಸಂಪುಟ ಮುಕ್ತಾಯವಾಗುವ ವೇಳೆಗೆ ಸಚಿವ ಈಶ್ವರಪ್ಪ ತಮ್ಮ ಪಟ್ಟು ಬಿಗಿಮಾಡುತ್ತಾರೆಯೇ ಅಥವಾ ಮುಖ್ಯ ಮಂತ್ರಿಗಳ ನಿರ್ಧಾರಕ್ಕೆ ತಲೆದೂಗುತ್ತಾರೋ ಕಾದು ನೊಡಬೇಕಿದೆ.

ಸಂಜೆ ಸಚಿವ ಸಂಪುಟದಲ್ಲಿ ಪ್ರಮುಖವಾಗಿ ಗ್ರಾಮ ಪಂಚಾಯಿತಿ ಚುನಾವಣೆ, ಆಡಳಿತಾಧಿಕಾರಿ ನೇಮಕದ ಬಗ್ಗೆ ಚರ್ಚೆ ನಡೆಯಿದೆ. ಪಕ್ಷದ ಬುತೇಕ ಸಚಿವರು ಮುಖ್ಯಮಂತ್ರಿಗಳ ತೀರ್ಮಾನಕ್ಕೆ ಸೈ ಎನ್ನುವುದು ಖಚಿತ. ಆದರೆ ಸಚಿವ ಈಶ್ವರಪ್ಪ ಅವರೂ ನಾಮ ನಿರ್ದೇಶಿತ ಸದಸ್ಯರ ನೇಮಕದ ಬಗ್ಗೆ ಹೆಚ್ಚಿನ ಒತ್ತಡ ಹೇರುತ್ತಿದ್ದಾರೆ. ಸಂಪುಟ ಸಭೆಯ ನಂತರ ಖಚಿತ ಮಾಹಿತಿ ಸಿಗಲಿದೆ ಎಂದು ಬಿಜೆಪಿ ಪಕ್ಷದ ಶಾಸಕರೊಬ್ಬರು ಪಬ್ಲಿಕ್ ಸ್ಟೋರಿಗೆ ಮಾಹಿತಿ ನೀಡಿದರು.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?