Thursday, March 28, 2024
Google search engine
Homeತುಮಕೂರು ಲೈವ್ಚಿತ್ರ ಬಿಡಿಸುವುದರಿಂದ ಪಠ್ಯದ ಕಡೆಗೆ ಗಮನ ಹೆಚ್ಚಲಿದೆ

ಚಿತ್ರ ಬಿಡಿಸುವುದರಿಂದ ಪಠ್ಯದ ಕಡೆಗೆ ಗಮನ ಹೆಚ್ಚಲಿದೆ

Publicstory. in


Tumukuru: ಮಕ್ಕಳು ಚಿತ್ರಗಳನ್ನು ಬಿಡಿಸುವುದನ್ನು ರೂಡಿಸಿಕೊಂಡರೆ ಅವರ ಮನಸ್ಸು ಹತೋಟಿಗೆ ಬಂದು ಅಭ್ಯಾಸದ ಕಡೆಗೆ ಕೇಂದ್ರೀಕೃತವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್. ನಟರಾಜ್ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಾಲಭವನ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ 5 ರಿಂದ 16ರ ವಯೋಮಾನದ ಮಕ್ಕಳಿಗೆ ಏರ್ಪಡಿಸಿದ್ದ ವೇಷಭೂಷಣ ಸ್ಪರ್ಧೆ ಉದ್ಘಾಟಿಸಿ ಅವರು ಮತನಾಡಿದರು.

ಮಕ್ಕಳು ಎಲ್ಲಾ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಆಗುವುದರ ಜೊತೆಗೆ ಬುದ್ಧಿಮತ್ತೆ ಹೆಚ್ಚಾಗುವುದೆಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರಮೇಶ್ ಅವರು ಮಾತನಾಡಿ, ಮಕ್ಕಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ರಾಷ್ಟ್ರಭಕ್ತಿ, ದೇಶಪ್ರೇಮ ವೃದ್ಧಿಸುವುದರ ಜೊತೆಗೆ ಯಾವುದೇ ಜಾತಿ, ಮತ, ಬೇಧ-ಭಾವವಿಲ್ಲದೇ ಒಟ್ಟಿಗೆ ಬೆಳೆಯುವಂತಾಗುತ್ತದೆ ಎಂದರು.

ಜಿಲ್ಲಾ ಬಾಲಭವನ ವ್ಯವಸ್ಥಾಪಕ ಕೃಷ್ಣನಾಯ್ಕ್, ಸಂಯೋಜಕಿ ಮಮತ ಪಿ, ಸ್ಪರ್ಧಾ ತೀರ್ಪುಗಾರರು, ಪೋಷಕರು, ವಿವಿಧ ಶಾಲೆಗಳ ಮಕ್ಕಳು ಉಪಸ್ಥಿತರಿದ್ದರು. ವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಶಂಸನ ಪತ್ರಗಳನ್ನು ನೀಡಿ ಗೌರವಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?