Thursday, January 16, 2025
Google search engine
Homeತುಮಕೂರು ಲೈವ್ಸರ್ಕಾರದಿಂದಲೇ ಕೊಬ್ಬರಿ ಖರೀದಿಗೆ ಒಪ್ಪಿಗೆ

ಸರ್ಕಾರದಿಂದಲೇ ಕೊಬ್ಬರಿ ಖರೀದಿಗೆ ಒಪ್ಪಿಗೆ

Publicstory.in


ತುಮಕೂರು: ಕೊರೊನಾ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊಬ್ಬರಿ ಖರೀದಿ ಕೇಂದ್ರವನ್ನು ತೆರೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಕೊಬ್ಬರಿ ಬೆಲೆಯೂ ಕೇಂದ್ರ ಸರಕಾರದ ಬೆಂಬಲ ಬೆಲೆಗಿಂತ ಕಡಿಮೆ ಕಡಿಮೆಯಾಗಿರುವ ಕಾರಣ ನಾಫೆಡ್ ಮೂಲಕ ಕೊಬ್ಬರಿ ಖರೀದಿಸುವಂತೆ ಹಲವು ರೈತ ಸಂಘಟನೆಗಳು, ರಾಜಕೀಯ ಮುಖಂಡರು, ರಾಜಕೀಯ ಪಕ್ಷಗಳು, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಜಿಲ್ಲೆಯ ಕೊಬ್ಬರಿಯೂ ಬಹುತೇಕವಾಗಿ ಉತ್ತರ ಭಾರತದ ರಾಜ್ಯಗಳಿಗೆ ರವಾನೆಯಾಗುತ್ತದೆ. ಉತ್ತರ ಭಾರತದ ರಾಜ್ಯಗಳಲ್ಲಿ ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ಕೊರೊನಾ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಕೊಬ್ಬರಿ ಬೇಡಿಕೆ ಕಳೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ ಕೊಬ್ಬರಿ ಖರೀದಿ ಕೇಂದ್ರವನ್ನು ತೆರೆಯುವಂತೆ ಶಾಸಕ ಬಿ.ಸಿ. ನಾಗೇಶ್ ಅವರು ಸರ್ಕಾರಕ್ಕೆ ಪತ್ರವನ್ನು ಬರೆದಿದ್ದರು.

ಶಾಸಕರ ಪತ್ರಕ್ಕೆ ಸ್ಪಂದಿಸಿರುವ ಸಚಿವ ನಾರಾಯಣ ಗೌಡ ಅವರು ಕೊಬ್ಬರಿ ಕೇಂದ್ರಗಳನ್ನು ತೆರೆಯಲು ಮುಂದಾಗುವಂತೆ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರ ಯಾವ ಬೆಲೆಯಲ್ಲಿ ಕೊಂಡುಕೊಳ್ಳಲಿದೆ ಎಂಬುದನ್ನು ನೋಡಬೇಕಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?