Friday, July 26, 2024
Google search engine
Homeತುಮಕೂರು ಲೈವ್ತುಮಕೂರು: 37 ಸಾವಿರ ವಿದ್ಯಾರ್ಥಿಗಳು ಬರೆಯಲಿದ್ದಾರೆ Sslc ಪರೀಕ್ಷೆ

ತುಮಕೂರು: 37 ಸಾವಿರ ವಿದ್ಯಾರ್ಥಿಗಳು ಬರೆಯಲಿದ್ದಾರೆ Sslc ಪರೀಕ್ಷೆ

ತುಮಕೂರು: ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಒಟ್ಟು 723 ಶಾಲೆಗಳ 37317 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ತುಮಕೂರಿನ 7 ಬ್ಲಾಕ್ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 92 ಹಾಗೂ ಮಧುಗಿರಿಯ 9 ಬ್ಲಾಕ್ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 68 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ತುಮಕೂರಿನ 2 ಹಾಗೂ ಮಧುಗಿರಿಯ 1 ಕೇಂದ್ರದಲ್ಲಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಮಧುಗಿರಿಯ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಪಾವಗಡ ತಾಲ್ಲೂಕಿನ ಅನುದಾನಿತ ಶಾಲೆಯಾದ ವೈ.ಎನ್. ಹೊಸಕೋಟೆಯ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯನ್ನು ಸೂಕ್ಷ್ಮ ಪರೀಕ್ಷಾ ಕೇಂದ್ರವೆಂದು ಗುರುತಿಸಲಾಗಿದೆ ಎಂದು ಡಿಡಿಪಿಐ ಎಂ.ಆರ್. ಕಾಮಾಕ್ಷಿ ಹಾಗೂ ರೇವಣ್ಣ ಸಿದ್ದಪ್ಪ ಸಭೆಗೆ ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳು ಪರೀಕ್ಷೆಯನ್ನು ಸುಗಮವಾಗಿ ಬರೆಯಲು ಅನುಕೂಲವಾಗುವಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಸಿಸಿಟಿವಿ ಅಳವಡಿಸದೆ ಇರುವ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ಅಳವಡಿಸಲು ಕ್ರಮವಹಿಸಬೇಕು. ಸಿದ್ಧಗಂಗಾ ಮಠ ಸೇರಿದಂತೆ ವಸತಿ ಶಾಲೆಗಳಲ್ಲಿ ಉಳಿದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪಟ್ಟಿಯನ್ನು ತಮಗೆ ಸಲ್ಲಿಸಬೇಕೆಂದು ಡಿಡಿಪಿಐಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.

ನಿಯೋಜಿತ ಪರೀಕ್ಷಾ ಸಿಬ್ಬಂದಿಗಳಿಗೆ ಸರ್ಕಾರದ ಮಾರ್ಗಸೂಚಿಗಳ ಪಾಲನೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಪರೀಕ್ಷಾ ಕಾರ್ಯಕ್ಕೆ ಸ್ವಯಂ ಸೇವಕರ ಅಗತ್ಯವಿದ್ದಲ್ಲಿ ಕೂಡಲೇ ಮಾಹಿತಿ ನೀಡಿದಲ್ಲಿ ಎನ್ಸಿಸಿ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮುಖ್ಯಸ್ಥರಿಗೆ ಸ್ವಯಂ ಸೇವಕರನ್ನು ಒದಗಿಸಲು ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಜಿ.ಪಂ. ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಹೆಚ್ಓ ಡಾ: ನಾಗೇಂದ್ರಪ್ಪ, ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಎನ್ಸಿಸಿ/ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮತ್ತಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?