Friday, April 19, 2024
Google search engine
Homeತುಮಕೂರು ಲೈವ್ತುರುವೇಕೆರೆಯಲ್ಲಿ 60 ಚಿರತೆ: ಶಾಸಕ ಮಸಾಲ ಜಯರಾಂ

ತುರುವೇಕೆರೆಯಲ್ಲಿ 60 ಚಿರತೆ: ಶಾಸಕ ಮಸಾಲ ಜಯರಾಂ

ತುಮಕೂರು: ತುರುವೇಕೆರೆ ತಾಲೂಕಿನಲ್ಲೂ ಚಿರತೆಗಳ ಹಾವಳಿ ಹೆಚ್ಚಾಗಿದೆ. ಇವುಗಳ ನಿಯಂತ್ರಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಸಾಲ ಜಯರಾಮ್ ಒತ್ತಾಯಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಇದುವರೆಗೆ ಮೂವರನ್ನು ನರಭಕ್ಷಕ ಚಿರತೆಗಳು ಬಲಿತೆಗೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ಚಿರತೆಗಳು ಮನುಷ್ಯರು ಮತ್ತು ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಚಿರತೆಗಳು ತುರುವೇಕೆರೆ ತಾಲೂಕೊಂದರಲ್ಲೇ 50-60 ಇವೆ. ಈಗಾಗಲೇ ದನ, ಕುರಿ, ಮೇಕೆ, ನಾಯಿಗಳನ್ನು ತಿಂದುಹಾಕಿವೆ. ಚಿರತೆಗಳ ದಾಳಿ ನಿರಂತವಾಗಿ ನಡೆಯುತ್ತಲೇ ಇದೆ. ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ದೂರಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಚಿರತೆಗಳ ದಾಳಿ ಸಂಬಂಧ ಜಿಲ್ಲಾಡಳಿತ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಚಿರತೆಗೆ ಬಲಿಯಾಗಲು ಜಿಲ್ಲಾಡಳಿತದ ವೈಫಲ್ಯವೇ ಕಾರಣ. ಚಿರತೆಗಳ ದಾಳಿ ನಿಯಂತ್ರಣಕ್ಕೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?