Thursday, March 28, 2024
Google search engine
Homeತುಮಕೂರು ಲೈವ್ಮೈಸೂರು ಅನಂತಸ್ವಾಮಿ ರಾಗಕ್ಕಿಲ್ಲ ಮನ್ನಣೆ: ಪತ್ನಿ ಬೇಸರ

ಮೈಸೂರು ಅನಂತಸ್ವಾಮಿ ರಾಗಕ್ಕಿಲ್ಲ ಮನ್ನಣೆ: ಪತ್ನಿ ಬೇಸರ

Tumkur: ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆಯನ್ನು ಅಧಿಕೃತ ಎಂದು ಇನ್ನೂ ಘೋಷಿಸದಿರುವ ಬಗ್ಗೆ ಮೈಸೂರು ಅನಂತಸ್ವಾಮಿ ಕುಟುಂಬ ತೀವ್ರ ಬೇಸರವನ್ನು ವ್ಯಕ್ತಪಡಿಸಿದೆ.

‘ಅವಧಿ’ ಅಂತರ್ಜಾಲ ತಾಣ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಬಹುರೂಪಿ’ ಪ್ರಕಾಶನ ಪ್ರಕಟಿಸಿರುವ ‘ನನ್ನ ಅಣ ಮೈಸೂರು ಅನಂತಸ್ವಾಮಿ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಬೇಸರ ವ್ಯಕ್ತವಾಯಿತು.

ಕೃತಿಯ ಲೇಖಕಿ, ಅನಂತಸ್ವಾಮಿಯವರ ಮಗಳಾದ ಸುನೀತಾ ಅನಂತಸ್ವಾಮಿ ಹಾಗೂ ಪತ್ನಿ ಶಾಂತ ಅನಂತಸ್ವಾಮಿ ಅವರು ಈ ಬೇಸರ ವ್ಯಕ್ತಪಡಿಸಿದರು.

೨೦೦೬ರಲ್ಲಿಯೇ ನಾಡಗೀತೆಗೆ ಯಾವ ರಾಗ ಸಂಯೋಜನೆಯನ್ನು ಉಳಿಸಿಕೊಳ್ಳಬೇಕು ಎಂದು ನಿರ್ಧರಿಸಲು ಸರ್ಕಾರ ರಚಿಸಿದ್ದ ಸಮಿತಿಯು ಮೈಸೂರು ಅನಂತಸ್ವಾಮಿಯವರ ರಾಗವನ್ನು ಶಿಫಾರಸು ಮಾಡಿತ್ತು. ಆದರೂ ಸಹಾ ಅದನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿಲ್ಲ. ಇದರಿಂದ ನಾಡಗೀತೆಯ ರಾಗ ವಿವಾದಕ್ಕೆ ತುತ್ತಾಗಿದೆ ಎಂದರು.

ಮೈಸೂರು ಅನಂತಸ್ವಾಮಿಯವರು ‘ಜಯ ಭಾರತ ಜನನಿಯ ತನುಜಾತೆ’ ಹಾಡಿಗೆ ಸಂಯೋಜಿಸಿದ ರಾಗವನ್ನು ಸ್ವತಃ ಕುವೆಂಪುರವರೇ ಮೆಚ್ಚಿದ್ದರು. ಸರ್ಕಾರ ಈ ಗೀತೆಯನ್ನು ನಾಡಗೀತೆ ಎಂದು ಪರಿಗಣಿಸುವ ಸಾಕಷ್ಟು ಮುಂಚೆಯೇ ಅನಂತಸ್ವಾಮಿಯವರು ಇದನ್ನು ನಾಡಿನ ಎಲ್ಲೆಡೆ ಹಾಡಿ ಜನಪ್ರಿಯಗೊಳಿಸಿದ್ದರು. ಖ್ಯಾತ ಹಾಡುಗಾರರಾದ ಪಿ ಕಾಳಿಂಗರಾಯರೂ ಸಹಾ ತಮ್ಮ ದಾಟಿಯನ್ನು ಬಿಟ್ಟು ಮೈಸೂರು ಅನಂತಸ್ವಾಮಿಯವರ ಸಂಯೋಜನೆಯನ್ನು ಮೆಚ್ಚಿ ಅದನ್ನು ಅಳವಡಿಸಿಕೊಂಡಿದ್ದರು.

ಅನಂತಸ್ವಾಮಿ ಅವರು ಭಾವಗೀತೆಯ ಲೋಕಕ್ಕೆ ಕೊಟ್ಟ ಕೊಡುಗೆ ಅಪಾರ. ನಾಡಗೀತೆಯ ರಾಗವನ್ನು ವಿವಾದಗೊಳಿಸುವ ಮೂಲಕ ಅವರಿಗೆ ಅವಮಾನ ಮಾಡಬೇಡಿ ಎಂದು ಅವರ ಕುಟುಂಬದವರು ಮನವಿ ಮಾಡಿದರು.

ಮೈಸೂರು ಅನಂತಸ್ವಾಮಿಯವರನ್ನು ಆಪ್ತವಾಗಿ ಚಿತ್ರಿಸುವ ಈ ಕೃತಿಯನ್ನು ಪ್ರಸ್ತುತ ಅಮೆರಿಕಾದಲ್ಲಿರುವ ಸುನೀತಾ ಅನಂತಸ್ವಾಮಿ ರಚಿಸಿದ್ದು ಅಪರೂಪದ ಛಾಯಾಚಿತ್ರಗಳನ್ನು ಹೊಂದಿದೆ.

ಕೃತಿಯನ್ನು bahuroopi.in ನಲ್ಲಿ ಕೊಳ್ಳಬಹುದು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?