Saturday, July 27, 2024
Google search engine
Homeತುಮಕೂರ್ ಲೈವ್ನೈತಿಕ ಶಿಕ್ಷಣ ಇಂದಿನ ಅಗತ್ಯ; ಯೋಗಿ ದೇವರಾಜ್

ನೈತಿಕ ಶಿಕ್ಷಣ ಇಂದಿನ ಅಗತ್ಯ; ಯೋಗಿ ದೇವರಾಜ್

ತುರುವೇಕೆರೆ: ಉದ್ಯೋಗಾಧಾರಿತ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು ಮತ್ತು ಪರಂಪರೆಯ ಸತ್ವಗಳನ್ನು ಪ್ರತಿಪಾದಿಸುವ ಶಿಕ್ಷಣದ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ ಎಂದು ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಘಟಕದ ಯೋಗ ಮತ್ತು ಧ್ಯಾನ ವಿಭಾಗದ ಅಧ್ಯಕ್ಷ ಡಾ.ಯೋಗಿ ದೇವರಾಜ್ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ರೋಟರಿ ಕ್ಲಬ್ ಮತ್ತು ರೋಟರಿ ಬೆಂಗಳೂರು ಯೋಗ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಗಮ್ಯ ಕೇವಲ ಉದ್ಯೋಗ, ಹಣ ಸಂಪಾದನೆ ಮತ್ತು ಐಶರಾಮಿ ಬದುಕಲ್ಲ. ಮನುಷ್ಯನ ವ್ಯಕ್ತಿವನ್ನು ವಿಕಸನಗೊಳ್ಳುವಂತೆ ಮಾಡಿ ಮಾನವೀಯತೆ ಮತ್ತು ಸಮಷ್ಠಿ ಪ್ರಜ್ಞೆಯ ಅರಿವು ಮೂಡಿಸುವುದೇ ಶಿಕ್ಷಣದ ಮೂಲ ಉದ್ದೇಶವಾಗಬೇಕು ಎಂದರು.

ಡಾ.ಎಸ್.ರಾಧಾಕೃಷ್ಣನ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದ ಕ್ಷೇತ್ರಶಿಕ್ಷಣಾಧಿಕಾರಿ ಸಿ.ರಂಗಧಾಮಯ್ಯ ‘ ಸಾಂಪ್ರದಾಯಿಕ ಶಿಕ್ಷಣದ ಜೊತೆ ಜೊತೆಗೇ ಮಕ್ಕಳಲ್ಲಿ ಕೌಶಲ ಹಾಗೂ ಬುದ್ದಿಮತ್ತೆಯನ್ನು ಹೆಚ್ಚಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಬದುಕಿನ ಸವಾಲನ್ನು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಬೇಕು ಎಂದ ಅವರು ಸನ್ಮಾನಕ್ಕೆ ಪಾತ್ರರಾದ ಅತ್ಯುತ್ತಮ ಶಿಕ್ಷಕರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಒಬ್ಬ ನಿವೃತ್ತ ಶಿಕ್ಷಕರೂ ಸೇರಿದಂತೆ 11 ಜನ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಎಚ್.ಎಂ.ವಸಂತಕುಮಾರ್, ಗ್ಲೋಬಲ್ ಯೋಗದ ಅಧ್ಯಕ್ಷ ಪಿ.ಎಸ್.ರವಿ, ಖಜಾಂಚಿ ಶರತ್, ಕ.ರಾ.ಪ್ರಾ.ಶಾ.ಶಿ. ಸಂಘದ ರಾಜ್ಯ ಉಪಾಧ್ಯಕ್ಷ ಷಣ್ಮುಖಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಭೈರಪ್ಪ ಉಪಸ್ಥಿತರಿದ್ದರು.

ರೋಟರಿ ಟ್ರಸ್ಟ್‌ನ ಅಧ್ಯಕ್ಷ ಟಿ.ಎಸ್.ಪ್ರಕಾಶ್‍ಗುಪ್ತಾ, ರೋಟರಿ ಮಾಜಿ ಅಧ್ಯಕ್ಷ ರಾಜಣ್ಣ, ಅರಳೀಕರೆ ಲೋಕೇಶ್, ಬರಹಗಾರ ತುರುವೇಕೆರೆ ಪ್ರಸಾದ್, ಟಿ.ರಾಮಚಂದ್ರು, ಸಾ.ಶಿ.ದೇವರಾಜ್, ಉಮೇಶ್ ಇತರರು ಭಾಗವಹಿಸಿದ್ದರು. ರೋಟರಿ ಅಧ್ಯಕ್ಷ ಜಿ. ಪ್ರಭುಸ್ವಾಮಿ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಎಸ್.ಶಿವರಾಜ್ ವಂದಿಸಿದರು. ರೊ. ಆನಂದವಾಡೇಕರ್ ಕಾರ್ಯಕ್ರಮ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?