Friday, July 26, 2024
Google search engine
Homeತುಮಕೂರು ಲೈವ್ಬಡ್ಡಿ ಮನ್ನ ಇಲ್ಲ ಎಂದ ಎಸ್ಬಿಐ

ಬಡ್ಡಿ ಮನ್ನ ಇಲ್ಲ ಎಂದ ಎಸ್ಬಿಐ

ತುಮಕೂರು:

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ಸಾಲಗಳ ಇಎಂಐ ಕಟ್ಟಲು ಆರು ತಿಂಗಳು ಮುಂದೂಡಿದ ಅವಕಾಶವನ್ನು ಆರ್‌ಬಿಐ ಕೊಟ್ಟಿದೆ.

ಆದರೆ, ಈ ಆರು ತಿಂಗಳಲ್ಲಿ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂಬ ಒತ್ತಾಯ ಇತ್ತು.

ಈ ಬಗ್ಗೆ ಶುಕ್ರವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮರುಪಾವತಿ ನಿಷೇಧದ ಆರು ತಿಂಗಳವರೆಗೆ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಸಾಲ ಮರುಪಾವತಿಯ ಮೇಲಿನ ನಿಷೇಧದ ಸಂದರ್ಭದಲ್ಲಿ ಬಡ್ಡಿಯನ್ನು ಮನ್ನಾ ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಯ ಬಗ್ಗೆ ಎಸ್‌ಬಿಐ, ಬಡ್ಡಿ ಮನ್ನಾ ಮಾಡಲಾಗುವುದಿಲ್ಲ ಎಂದು ಹೇಳಿದೆ.

ಬಡ್ಡಿ ಮನ್ನಾ ಕುರಿತಂತೆ ಮೂರು ದಿನಗಳಲ್ಲಿ ವಿವರವಾದ ಉತ್ತರ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಪ್ರಕರಣವನ್ನು ಜೂನ್ 17 ರಂದು ಸುಪ್ರೀಂಕೋರ್ಟ್ ವಿಚಾರಣೆಗೆ ನಿಗದಿಪಡಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್.ಕೆ.ಕೌಲ್ ಮತ್ತು ಎಮ್.ಆರ್.ಶಾ ಅವರು ಅರ್ಜಿಯ ವಿಚಾರಣೆ ನಡೆಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?