Saturday, July 20, 2024
Google search engine
Homeಜಸ್ಟ್ ನ್ಯೂಸ್ಬಸ್ ಕಂಡಕ್ಟರ್, ಚಾಲಕರಿಗೆ‌ ಕೊರೊನಾ ವಿಮೆ ವ್ಯಾಪ್ತಿಗೆ ಒತ್ತಾಯ

ಬಸ್ ಕಂಡಕ್ಟರ್, ಚಾಲಕರಿಗೆ‌ ಕೊರೊನಾ ವಿಮೆ ವ್ಯಾಪ್ತಿಗೆ ಒತ್ತಾಯ

Publicstory.in


ಬೆಂಗಳೂರು: ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ರಸ್ತೆ ಸಾರಿಗೆಯ ನಿರ್ವಾಹಕರು, ಚಾಲಕರನ್ನು 50ಲಕ್ಷ ವಿಮೆ ಪ್ಯಾಕೇಜ್ ಗೆ ಒಳಪಡಿಸಬೇಕು ಎಂದು ಬಿಎಂಟಿಸಿ ಕಾರ್ಮಿಕರ ಸಂಘ ಒತ್ತಾಯಿಸಿದೆ.

ವಿಪತ್ತು ಪರಿಹಾರ ಕಾಯ್ದೆಯಡಿ ಈಗಾಗಲೇ ವೈದ್ಯರು, ವೈದ್ಯ ಸಿಬ್ಬಂದಿ ಹಾಗೂ ಇನ್ನಿತರರು ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರ ಕುಟುಂಬ ವರ್ಗಕ್ಕೆ 50 ಲಕ್ಷ ವಿಮೆ ನೀಡಲಾಗುತ್ತಿದೆ. ಇದನ್ನು ಬಸ್ ಚಾಲಕರು, ನಿರ್ವಾಹಕರಿಗೂ ನೀಡಬೇಕು ಎಂದು ಹೇಳಿದ್ದಾರೆ.

ಲಾಕ್ ಡೌನ್ ಸಡಿಲಗೊಂಡ ಬಳಿಕ ಸಾರಿಗೆ ಬಸ್ ಗಳನ್ನು ಬಿಡಲಾಗಿದೆ. ಪ್ರತಿ ದಿನ ಜನರನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಿಸುವ ಅಪಾಯಕಾರಿ ಕೆಲಸದಲ್ಲಿ ಸಿಬ್ಬಂದಿ ತೊಡಗಿದ್ದಾರೆ ಎಂದು ಸಂಘಟನೆಯ ಅಧ್ಯಕ್ಷ ರಂಗಪ್ಪ, ಉಪಾಧ್ಯಕ್ಷ ಡಾ.ಕೆ.ಪ್ರಕಾಶ್ ಹೇಳಿದ್ದಾರೆ.

ಆರೋಗ್ಯ ರಕ್ಷಾ ಕವಚಗಳು, ಸ್ಯಾನಿಟೈಜರ್ ಮತ್ತಿತರ ಸೌಲಭ್ಯಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?