Saturday, July 27, 2024
Google search engine
Homeತುಮಕೂರ್ ಲೈವ್ಮಲ್ಲಿಕಾರ್ಜುನ ದುಂಡ ಗೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ

ಮಲ್ಲಿಕಾರ್ಜುನ ದುಂಡ ಗೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿ

Publicstory


ತುರುವೇಕೆರೆ: ವಿವಿಧ ರಂಗಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರ್ತಿಸಿ ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನೀಡುವ ಪದ್ಮಭೂಷಣ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ತುರುವೇಕೆರೆಯ ಮಲ್ಲಿಕಾರ್ಜುನ ದುಂಡ ಆಯ್ಕೆಯಾಗಿದ್ದಾರೆ.

ಮಲ್ಲಿಕಾರ್ಜುನ ದುಂಡ ಅವರು 3 ಬಾರಿ ಛಾಯಾಗ್ರಾಹಕ ಸಂಘದ ತಾಲ್ಲೂಕು ಅಧ್ಯಕ್ಷರಾಗಿ, 2 ಬಾರಿ ಲಯನ್ಸ್ ಅಧ್ಯಕ್ಷರಾಗಿ, ಕಾಲಬೈರವೇಶ್ವರ ಕಲಾ ಸಂಘದ ಖಜಾಂಚಿ, ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ಕಾರ್ಯದರ್ಶಿ, ವಚನ ಸಾಹಿತ್ಯ ಪರಿಷತ್ತು ಹಾಗೂ ಜಯಕರ್ನಾಟಕ ಜನಪರ ವೇದಿಕೆ ಗೌರವಾಧ್ಯಕ್ಷ, ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಕಾರ್ಯದರ್ಶಿ ಹಾಗೂ ಖಜಾಂಚಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸದಸ್ಯ ಹಾಗೂ ಹಾಲಿ ಗ್ರಾಮೀಣ ಕಾರ್ಯದರ್ಶಿ ಸೇರಿದಂತೆ ತಾಲ್ಲೂಕಿನ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಗಣನೀಯ ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸೇವೆ ಗುರ್ತಿಸಿ ತಾಲ್ಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ತಾಲ್ಲೂಕು ಬಸವ ಸದನ ವತಿಯಿಂದ ಬಸವಪ್ರಭ ಪ್ರಶಸ್ತಿ, ರೋಟರಿ ಸಂಸ್ಥೆಯಿಂದ ಡೈಮಂಡ್ ಹೀರೋ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಅವರಿಗೆ ಸಂದಿವೆ.
ಇಂತಹ ಹತ್ತು ಹಲವು ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಹೊಂದಿರುವ ಮಲ್ಲಿಕಾರ್ಜುನ ದುಂಡ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ 2021-22 ನೇ ಸಾಲಿನ ಸಾಧಕರಿಗೆ ನೀಡುವ ಪದ್ಮಭೂಷಣ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ನ.13 ರಂದು ಶನಿವಾರ ಬೆಂಗಳೂರಿನ ನಯನ ಸಭಾಂಗಣ (ಕನ್ನಡ ಭವನ) ದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರಶಸ್ತಿಗೆ ಆಯ್ಕೆಗೊಂಡ ಮಲ್ಲಿಕಾರ್ಜುನ ದುಂಡ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾಲ್ಲೂಕಿನ ಲಯನ್ಸ್ ಕ್ಲಬ್, ಛಾರಿಟಬಲ್ ಟ್ರಸ್ಟ್, ರೋಟರಿ ಕ್ಲಬ್, ಚಿತ್ರಕಲಾ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಜಯಕರ್ನಾಟಕ ಸಂಘಟನೆ, ತಾಲ್ಲೂಕುಕಲಾವಿದರ ಸಂಘ, ವಚನ ಸಾಹಿತ್ಯ ಪರಿಷತ್ತು ಸೇರಿದಂತೆ ಅನೇಕ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?