ತುಮಕೂರ್ ಲೈವ್

ಮಹಿಳೆಯ ಕೊಲೆ

ಹೊಲದಿಂದ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ಮಹಿಳೆಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ತುಮಕೂರು ಸಮೀಪದ ದೊಡ್ಡಸಿದ್ದಯ್ಯನಪಾಳ್ಯದಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು 35 ವರ್ಷದ ಭಾಗ್ಯಮ್ಮ ಎಂದು ಗುರುತಿಸಲಾಗಿದೆ. ಶುಕ್ರವಾರ ಸುಮಾರು 3.30ರ ಸಮಯದಲ್ಲಿ ಹೊಲದಿಂದ ಮನೆಗೆ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಎದುರಾದ ವ್ಯಕ್ತಿ ಆಕೆ ಮಾಂಗಲ್ಯ ಸರಕ್ಕೆ ಕೈಹಾಕಿದ್ದಾನೆ.

ಚಾಕುವಿಂದ ಮಾಂಗಲ್ಯ ಸರ ಕತ್ತರಿಸಲು ಮುಂದಾದಾಗ ಆಕೆ ಜಗ್ಗಿದ್ದು ಆ ಸಂದರ್ಭದಲ್ಲಿ ಚಾಕು ಆಕೆಯ ಕುತ್ತಿಗೆಯನ್ನು ಸೀಳಿದೆ. ತೀವ್ರ ರಕ್ತಸ್ರಾವವಾಗಿ ಹಳ್ಳದಲ್ಲಿ ಇಳಿದು ಹತ್ತುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಇಸ್ಪೀಟು ಆಟದಲ್ಲಿ ಸೋತಿದ್ದ. ಸಾವಿರಾರು ರೂಪಾಯಿಗಳನ್ನು ಕಳೆದುಕೊಂಡಿದ್ದ. ಮತ್ತೆ ಆಟ ಆಡಲು ಹಣ ಬೇಕಾಗಿದ್ದರಿಂದ ಮಾಂಗಲ್ಯ ಸರ ಕದಿಯಲು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Comment here