Friday, March 29, 2024
Google search engine
Homeತುಮಕೂರ್ ಲೈವ್ಮೂರು ದಿನ ಸಿಐಟಿಯು ಸಮ್ಮೇಳನ

ಮೂರು ದಿನ ಸಿಐಟಿಯು ಸಮ್ಮೇಳನ

ಕಾರ್ಮಿಕರು, ರೈತರು, ಮಹಿಳೆಯರ ಕುರಿತು ಚರ್ಚೆ
ಸಮಗ್ರ, ಸಮೃದ್ದ ಹಾಗೂ ಸೌಹಾರ್ದ ಕರ್ನಾಟಕ ಘೋಷಣೆಯಡಿ ಸಿಐಟಿಯುನ ೧೪ನೇ ಸಮ್ಮೇಳನವು ನವೆಂಬರ್ 8,9 ಮತ್ತು 10 ರಂದು ಮೂರು ದಿನಗಳ ಕಾಲ ನಡೆಯಲಿದೆ.

ಬಹಿರಂಗ ಸಭೆಗೆ ಸಿಐಟಿಯು ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಚಾಲನೆ ನೀಡುವರು.
ಡಾ.. ಹೇಮಲತ, ಎ.ಕೆ. ಪದ್ಮನಾಭನ್, ಕೆ.ದೊರೈರಾಜ್, ಸೈಯದ್ ಮುಜೀಬ್ ಭಾಗವಹಿಸುವರು.

ಸಮ್ಮೇಳನದಲ್ಲಿ ರಾಜ್ಯದ ವಿವಿಧ ಕೈಗಾರಿಕೆಗಳ, ಸಾರ್ವಜನಿಕ ವಲಯದ ಕೈಗಾರಿಕೆಗಳ, ಸ್ಕೀಂ ನೌಕರರು, ಪಂಚಾಯತ್ ನೌಕರರು, ಕಟ್ಟಡ ಕಾರ್ಮಿಕರು, ಸಾರಿಗೆ ವಲಯವಾದ ಆಟೋ, ರಸ್ತೆ ಸಾರಿಗೆ, ಖಾಸಗಿ ಬಸ್ ಚಾಲಕರು, ಹಮಾಲಿ, ಬೀಡಿ, ಪೌರಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಮನೆಗೆಲಸಗಾರರು, ಟೈಲರ್ಗಳು, ಸ್ಕೀಂ ನೌಕರರಾದ ಅಂಗನವಾಡಿ, ಅಕ್ಷರದಾಸೋಹ, ಆಶಾ ಹಾಗು ಘನಕೈಗಾರಿಕೆಗಳು ಮತ್ತು ವಿವಿಧ ವಲಯದ ಕೈಗಾರಿಕೆಗಳ ಆಯ್ದ ೫೦೦ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಮ್ಮೇಳನವು ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕ ಪದ್ದತಿ, ಗುತ್ತಿಗೆ ಕಾರ್ಮಿಕರ ಕಾಯಂಮಾತಿ, ಸ್ಕೀಂ ನೌಕರರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ತರುವುದಲ್ಲದೆ ಅವರ ಸೇವೆ ಕಾಯಂಗೊಳಿಸುವ ಸಂಘಟಿತ ಕಾರ್ಮಿಕರಿಗೆ ಸೇವಾ ಭಧ್ರತೆ ಹಾಗೂ ಸಾಮಾಜಿಕ ಭದ್ರತೆ ಪ್ರಶ್ನೆಗಳು ಕೇಂದ್ರ ಸರ್ಕಾರದ ಕಾರ್ಮಿಕರ ಕಾನೂನುಗಳ ಬದಲಾವಣೆ ಮತ್ತು ಸಂಹಿತೆಗಳಾಗಿ ಮಾಡುತ್ತಿರುವುದು, ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ, ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆ, ಐಕ್ಯತೆ ಮುರಿಯುವ ಕೋಮುವಾದ ಇವೇ ಮೊದಲಾದ ಪ್ರಶ್ನೆಗಳ ಆಧಾರದಲ್ಲಿ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.

ಪ್ರಸಕ್ತ ಸನ್ನಿವೇಶದಲ್ಲಿ ಬಡವರಿಗೆ ಕೊಳ್ಳುವ ಶಕ್ತಿಯನ್ನು ಹೆಚ್ಚಳ ಮಾಡುವ ಯಾವುದೇ ಕ್ರಮಗಳನ್ನು ಸರ್ಕಾರ ಮಾಡುತ್ತಿಲ್ಲ. ಕೃಷಿ ಉತ್ಪಾನಾ ವಲಯ ಕುಂಠಿತಗೊಂಡಿದೆ. ರೈತರಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಸ್ವಾಮಿನಾಥನ್ ಶಿಫಾರಸು ಜಾರಿಯಾಗುತ್ತಿಲ್ಲ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ಸಂಘಟನಾ ಕ್ರಮದ ಭಾಗವಾಗಿ ತ್ರೆöÊವಾರ್ಷಿಕ ಸಮ್ಮೇಳನ ಸಂಘಟಿಸಲಾಗುತ್ತಿದ್ದು ರಾಜ್ಯದ 30 ಜಿಲ್ಲೆಗಳಿಂದ 400 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಯಶಸ್ವಿಗೆ ಸ್ವಾಗತ ಸಮಿತಿ ರಚಿಸಲಾಗಿದ್ದು ಕಾರ್ಮಿಕರು ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದ್ದಾಎ. ರೈತರು ಸಾರ್ವಜನಿಕರಿಂದ ಉತ್ಸಾಹದಾಯಕ ಪ್ರತಿಕ್ರಿಯೆ ದೊರೆತಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?