ತುಮಕೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು ಭಾನುವಾರ 53 ಜನರಿಗೆ ಸೋಂಕು ಕಾಣಿಸಿಕೊಂಡಿದೆ.
ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆಯಾಗಿದೆ. ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.
ಶಿವಮೊಗ್ಗದಲ್ಲಿ 8 :
ಗ್ರೀನ್ ವಲಯದಲ್ಲಿದ್ದ ಶಿವಮೊಗ್ಗದಲ್ಲಿ ಇಂದು ಒಂದೇ ದಿನದಲ್ಲಿನ 8 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಹಮದಾಬಾದ್ನಲ್ಲಿ ನಡೆದ ತಬ್ಲಿಘ್ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಎಲ್ಲರನ್ನು ನಿಗಧಿತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯಲ್ಲಿ ಅಟ್ಟಹಾಸ :
ಕುಂದಾನಗರಿ ಬೆಳಗಾವಿಯಲ್ಲಿ 22 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 107 ಕ್ಕೆ ಏರಿಕೆಯಾಗಿದೆ. ಇವರೆಲ್ಲರೂ ರಾಜಸ್ಥಾನದ ಅಜ್ಮಿರ್ ದರ್ಗಾಕ್ಕೆ ತೆರಳಿದ್ದರು ಎನ್ನಲಾಗಿದೆ.
ಬಾಗಲಕೋಟೆಯ 8 ಜನರಿಗೆ :
ಬಾಗಲಕೋಟೆಯ 8 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 59 ಕ್ಕೆ ಏರಿಕೆಯಾಗಿದೆ.
ಉತ್ತರ ಕನ್ನಡದಲ್ಲಿ 7 ಜನರಿಗೆ ಸೋಂಕು
ಇನ್ನು ಉತ್ತರ ಕನ್ನಡದಲ್ಲಿ 7 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ.
ಒಟ್ಟು ಪ್ರಕರಣಗಳು
ಉತ್ತರ ಕನ್ನಡ – 07
ಬೆಂಗಳೂರು – 03
ಕಲಬುರಗಿ – 03
ಬೆಳಗಾವಿ – 22
ಬಾಗಲಕೋಟೆ – 08
ಶಿವಮೊಗ್ಗ – 08
ಚಿಕ್ಕಬಳ್ಳಾಪುರ – 01
ದಾವಣಗೆರೆ – 01