Saturday, July 27, 2024
Google search engine
Homeಜಸ್ಟ್ ನ್ಯೂಸ್ರಾಜ್ಯದಲ್ಲಿ ಭಾನುವಾರ ಕೊರೊನಾ ಅಟ್ಟಹಾಸ: ನಡುಗಿದ ಜನರು

ರಾಜ್ಯದಲ್ಲಿ ಭಾನುವಾರ ಕೊರೊನಾ ಅಟ್ಟಹಾಸ: ನಡುಗಿದ ಜನರು

ತುಮಕೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದ್ದು ಭಾನುವಾರ 53 ಜನರಿಗೆ ಸೋಂಕು ಕಾಣಿಸಿಕೊಂಡಿದೆ.

ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆಯಾಗಿದೆ. ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

ಶಿವಮೊಗ್ಗದಲ್ಲಿ 8 :

ಗ್ರೀನ್ ವಲಯದಲ್ಲಿದ್ದ ಶಿವಮೊಗ್ಗದಲ್ಲಿ ಇಂದು ಒಂದೇ ದಿನದಲ್ಲಿನ 8 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಹಮದಾಬಾದ್‌ನಲ್ಲಿ ನಡೆದ ತಬ್ಲಿಘ್ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಎಲ್ಲರನ್ನು ನಿಗಧಿತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯಲ್ಲಿ ಅಟ್ಟಹಾಸ :

ಕುಂದಾನಗರಿ ಬೆಳಗಾವಿಯಲ್ಲಿ 22 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 107 ಕ್ಕೆ ಏರಿಕೆಯಾಗಿದೆ. ಇವರೆಲ್ಲರೂ ರಾಜಸ್ಥಾನದ ಅಜ್ಮಿರ್ ದರ್ಗಾಕ್ಕೆ ತೆರಳಿದ್ದರು ಎನ್ನಲಾಗಿದೆ.

ಬಾಗಲಕೋಟೆಯ 8 ಜನರಿಗೆ :

ಬಾಗಲಕೋಟೆಯ 8 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 59 ಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡದಲ್ಲಿ 7 ಜನರಿಗೆ ಸೋಂಕು

ಇನ್ನು ಉತ್ತರ ಕನ್ನಡದಲ್ಲಿ 7 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ.

ಒಟ್ಟು ಪ್ರಕರಣಗಳು

ಉತ್ತರ ಕನ್ನಡ – 07
ಬೆಂಗಳೂರು – 03
ಕಲಬುರಗಿ – 03

ಬೆಳಗಾವಿ – 22
ಬಾಗಲಕೋಟೆ – 08
ಶಿವಮೊಗ್ಗ – 08

ಚಿಕ್ಕಬಳ್ಳಾಪುರ – 01
ದಾವಣಗೆರೆ – 01

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?