Saturday, July 27, 2024
Google search engine
Homeಜಸ್ಟ್ ನ್ಯೂಸ್ರುಧ್ರಭೂಮಿಗಾಗಿ ಪ್ರತಿಭಟನೆ

ರುಧ್ರಭೂಮಿಗಾಗಿ ಪ್ರತಿಭಟನೆ

ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನಾದ್ಯಂತ ಗ್ರಾಮಗಳಲ್ಲಿ ರುಧ್ರಭೂಮಿ ಮಂಜೂರು ಮಾಡಿಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ಬೌಧ್ಧ ಸಮಾಜದ ನೇತೃತ್ವದಲ್ಲಿ ದಲಿತ ಸಮುದಾಯದವರು ಸೊಮವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟಿಸಿದರು.

ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ರುಧ್ರಭೂಮಿಯಿಲ್ಲದೆ ದಲಿತ ಸಮುದಾಯದವರು ಸಮಸ್ಯೆ ಅನುಭವಿಸುತ್ತಿದ್ದಾರೆ. ನೂರಾರು ವರ್ಷಗಳಿಂದ ಅಂತ್ಯಸಂಸ್ಕಾರ ಮಾಡುತ್ತಿರುವ ಸ್ಥಳಗಳಲ್ಲಿ ಕೆಲವರು ಶವ ಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕತಿಕ್ಯಾತನಹಳ್ಳಿ ಗ್ರಾಮದಲ್ಲಿ ದಲಿತರನ್ನು ಶವ ಸಂಸ್ಕಾರ ಮಾಡದಂತೆ ತಡೆದ ನಿದರ್ಶನಗಳಿವೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.

ದಲಿತ ಮುಖಂಡ ಸುಬ್ಬರಾಯಪ್ಪ. ಕೆಲ ಗ್ರಾಮಗಳಲ್ಲಿ ಬಂಡೆ ಇರುವ ಸ್ಥಳವನ್ನು ಸರ್ಕಾರ ರುಧ್ರಭೂಮಿಗೆ ಮಂಜೂರು ಮಾಡಿಕೊಟ್ಟಿದೆ. ಶವ ಸಂಸ್ಕಾರದ ನಂತರ ಮೃತದೇಹಗಳನ್ನು ಪ್ರಾಣಿಗಳು ಹೊರತೆಗೆಯುವ ಸಂಭವವಿದೆಸತ್ತ ನಂತರವೂ ದಲಿತರನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿದರು.

ಮುಖಂಡ ಕೋರ್ಟ್ ನರಸಪ್ಪ, ಹಿಂದಿನಿಂದ ಶವಸಂಸ್ಕಾರ ಮಾಡಿಕೊಂಡು ಬರುತ್ತಿರುವ ಸ್ಥಳವನ್ನು ರುಧ್ರಭೂಮಿಯಾಗಿ ಪರಿವರ್ತಿಸಬೇಕು. ಗ್ರಾಮದಿಂದ ಸಾಕಷ್ಟು ಇರುವ ಸ್ಥಳಗಳಿಗೆ ಹೋಗಲು ಸಾದ್ಯವಾಗುವುದಿಲ್ಲ. ಅಧಿಕಾರಿಗಳು ಆದ್ಯತೆ ಮೇರೆಗೆ ಸಮಸ್ಯೆ ಬಗೆಹರಿಸಬೇಕು ಎಂದರು.

ಪಳವಳ್ಳಿ ಸುಬ್ಬರಾಜು, ಸಾಕಷ್ಟು ಬಾರಿ ತಹಶೀಲ್ದಾರರು ಸೇರಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಕೇವಲ ಭರವಸೆ ನಿಡಲಾಗುತ್ತಿದೆಯೇ ಹೊರತು ಸಮಸ್ಯೆ ಪರಿಹರಿಸುತ್ತಿಲ್ಲ ಎಂದು ದೂರಿದರು.

ಪಟ್ಟಣದ ಶನೈಶ್ಚರ ದೇಗುಲ ವೃತ್ತದಿಂದ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ನಂದೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು.

ದಲಿತ ಮುಖಂಡರಾದ ಬಿ.ಎಸ್.ಪಿ. ಮಂಜುನಾಥ್, ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಸಿ.ಕೆ.ಪುರ ಹನುಮಂತರಾಯ, ರಾಮಕೃಷ್ಣ  ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?