ತುಮಕೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಈ ತಿಂಗಳು ನಿವೃತ್ತಿಯಾಗಬೇಕಾಗಿದ್ದ ಸಿಬ್ಬಂದಿಯ ನಿವೃತ್ತಿಯನ್ನು ಅವಧಿಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ಕೊರೊನಾ ತುರ್ತುಪರಿಸ್ಥಿತಿ ಇರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಇಲಾಖೆಯ ಕ್ಲಿನಿಕಲ್, ನಾನ್ ಕ್ಲಿನಿಕಲ್ ಸೇವೆಯಲ್ಲಿರುವ ಎಲ್ಲ ಸಿಬ್ಬಂದಿಗೆ ಈ ಆದೇಶ ಅನ್ವಯವಾಗಲಿದೆ. ನಿವೃತ್ತಿ ಅವಧಿಯನ್ನು ಒಂದು ತಿಂಗಳ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಆಖ್ತರ್ ತಿಳಿಸಿದ್ದಾರೆ.