ಜಸ್ಟ್ ನ್ಯೂಸ್

ಶಾಸಕ ರಾಮದಾಸ್ ಗೆ ಲಘು ಹೃದಯಾಘಾತ

ತುಮಕೂರು : 

ಕೆ.ಆರ್. ಕ್ಷೇತ್ರದ ಬಿಜೆಪಿ‌ ಶಾಸಕ ಹಾಗೂ ಮಾಜಿ ಸಚಿವ ರಾಮದಾಸ್ ಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಘು ಹೃದಯಾಘಾತದ ಹಿನ್ನಲೆ ಶಾಸಕ ರಾಮದಾಸ್‌ ಗೆ ಸ್ಟಂಟ್ ಅಳವಡಿಕೆ ಮಾಡಲಾಗಿದೆ. ರಾಮದಾಸ್ ಅವರಿಗೆ ಆ್ಯಂಜಿಯೊ ಪ್ಲಾಸ್ಟ್ ಚಿಕಿತ್ಸೆ ಮಾಡಲಾಗಿದೆ‌. ಮಧ್ಯರಾತ್ರಿ ವೇಳೆ ರಾಮದಾಸ್ ಹೃದಯಾಘಾತಕ್ಕೆ ತುತ್ತಾಗಿದ್ದರು. ತಕ್ಷಣ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಕ್ತನಾಳ ಹೆಪ್ಪುಗಟ್ಟಿದ್ದರಿಂದ ಹೃದಯಾಘಾತ ಸಂಭವಿಸಿದೆ ವೈದ್ಯರು ಹೇಳಿದ್ದಾರೆ. ಸದ್ಯ ಶಾಸಕ ರಾಮದಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Comment here