Saturday, July 27, 2024
Google search engine
Homeತುಮಕೂರು ಲೈವ್ಸಚಿವ ಸಂಪುಟ ವಿಸ್ತರಣೆ: ಸೂಕ್ತ ಸಮಯದಲ್ಲಿ ಸಿಎಂ ತೀರ್ಮಾನ

ಸಚಿವ ಸಂಪುಟ ವಿಸ್ತರಣೆ: ಸೂಕ್ತ ಸಮಯದಲ್ಲಿ ಸಿಎಂ ತೀರ್ಮಾನ

ತುಮಕೂರು: ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿಗಳು ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶಕ್ಕೆ ಹೋಗಿದ್ದಾರೆ. ಅವರು ಬಂದ ಮೇಲೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಉಪಮುಖ್ಯಮಂತ್ರಿ ಕೊಡುವವರು ಮತ್ತು ತೆಗೆದುಕೊಳ್ಳುವವರು ಅವರೇ ಆಗಿದ್ದಾರೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಹೇಳಿದರು.

ಪೌರತ್ವದ ಕುರಿತು ಜಾರಿಗೆ ತಂದಿರುವ ಕಾನೂನನ್ನು ಎಲ್ಲರೂ ಗೌರವಿಸಬೇಕು. ಹಿಂದೆ ವಿರೋಧ ಪಕ್ಷದ ಮುಖಂಡರು ಕೂಡ ಪೌರತ್ವದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಈಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.

ವಿದೇಶಗಳಿಂದ ವಲಸೆ ಬಂದವರನ್ನು ಏನು ಮಾಡಬೇಕು. ಅವರನ್ನು ಇಲ್ಲೇ ಇಟ್ಟುಕೊಳ್ಳಲು ಆಗುವುದಿಲ್ಲ. ಹಾಗಾಗಿ ಪೌರತ್ವ ಕಾನೂನು ಜಾರಿಗೆ ತಂದಿದೆ. ಜನರಿಗೆ ಇದರಿಂದ ಒಳ್ಳೆಯದಾಗುತ್ತದೆ. ಆದರೆ ವಿರೋಧ ಪಕ್ಷಗಳ ನಾಯಕರು ಜನರಲ್ಲಿ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ. ಇದರಿಂದ ದೇಶಕ್ಕೆ ಒಳ್ಳೆಯದಾಗಲ್ಲ ಎಂದು ಹೇಳಿದರು.

ವಿರೋಧ ಪಕ್ಷಗಳು ಜನರಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಆತಂಕ ಮೂಡಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಭಯ ಹುಟ್ಟಿಸುವ ಕೆಲಸ ಮಾಡಬಾರದು. ಹಿಂದಿನಿಂದ ಭಯ ಹುಟ್ಟಿಸುವ ಕೆಲಸ ಮಾಡುವುದನ್ನು ವಿರೋಧ ಪಕ್ಷದ ನಾಯಕರು ಬಿಡಬೇಕು ಎಂದು ತಿಳಿಸಿದರು.

ಮುಸ್ಲೀಮರಿಗೂ ಪೌರತ್ವ ನೀಡಲಾಗುವುದು. ಅವರನ್ನು ಇಲ್ಲಿಂದ ಓಡಿಸುವುದಿಲ್ಲ. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದಿಲ್ಲ. ನಮ್ಮ ಸರ್ಕಾರ ಧರ್ಮವನ್ನು ಮೀರಿ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಸೌಹಾರ್ದತೆ, ಸೋದರತ್ವ ಮೂಡಿಸುವುದು ನಮ್ಮ ನೆಲದಲ್ಲೇ ಅಡಗಿದೆ. ನಮ್ಮ ನೆಲ ಯಾರನ್ನೂ ದ್ವೇಷಿಸುವುದಿಲ್ಲ. ಮಾಡುವುದಕ್ಕೂ ಬಿಡುವುದಿಲ್ಲ ಎಂದು ಹೇಳಿಕೊಂಡರು.

ದೀನದಲಿತರು, ಹಿಂದುಳಿದವರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಹೇಳಿಕೊಡುವುದು ಸುಲಭ. ಇಂತಹ ಹೇಳಿಕೆಗಳನ್ನು ಯಾಕೆ ಕೊಡುತ್ತಿದ್ದಾರೆ ಎಂದು. NRC, NPR, ಯಾರು ಆರಂಭಿಸಿದ್ದು, 130 ಕೋಟಿ ಜನರಿಗೆ ಆಧಾರ್ ಇದೆ. ಅವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆಯೇ? ಇಲ್ಲವಲ್ಲ. ಒಳ್ಳೆಯ ವ್ಯವಸ್ಥೆ ಇದೆ. ವ್ಯವಸ್ಥೆಯನ್ನು ಉತ್ತಮಗೊಳಿಸುವುದು ಇದರ ಉದ್ದೇಶ ಎಂದರು.

ಯಾವ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಇಲ್ಲ. ಅಲ್ಲಿ ಸ್ಥಾಪನೆ ಮಾಡುತ್ತೇವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?