Saturday, April 13, 2024
Google search engine
HomeUncategorizedಸಾಕ್ಷರತೆಯ ಸಾಕಾರ

ಸಾಕ್ಷರತೆಯ ಸಾಕಾರ

ತುಮಕೂರು ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಸಾಮಗ್ರಿ ವಿತರಣಾ ಸಮಾರಂಭಕ್ಕೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಚಾಲನೆ ನೀಡಿದರು. ಹೆಗ್ಗೆರೆಯ ಕಲಿಕಾ ಕೇಂದ್ರವು ಹೆಗ್ಗೆರೆ ಗ್ರಾಮ ಪಂಚಾಯತಿಯಯನ್ನು ಸಂಪೂರ್ಣ ಸಾಕ್ಷರತಾ ಪಂಚಾಯತಿಯನ್ನಾಗಿ ರೂಪಿಸಲು ಇಟ್ಟಿರುವ ಹೆಜ್ಜೆ ಶ್ಲಾಘನೀಯ, ಅನಕ್ಷರಸ್ಥರು ಈ ಕಲಿಕಾ ಸಾಮಗ್ರಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ನಿವೃತ್ತ ತಹಶೀಲ್ದಾರ್ ವೈ.ಕಾಂತವೀರಯ್ಯ ಮಾತನಾಡಿ, ವಿದ್ಯೆಯುಳ್ಳವನ ಮುಖವು ಮುದ್ದು ಬರುವಂತಕ್ಕದ್ದು-ವಿದ್ಯೆಯಿಲ್ಲದವನ ಮುಖವು ಹಾಳೂರ ಹದ್ದಿನಂತಕ್ಕದ್ದು’ ಎಂಬ ಸರ್ವಜ್ಞನ ವಚನವನ್ನು ಉಲ್ಲೇಖಿಸಿ ಹೆಗ್ಗೆರೆ ಗ್ರಾಮಪಂಚಾಯತಿಯನ್ನು ಸಂಪೂರ್ಣ ಸಾಕ್ಷರತಾ ಪಂಚಾಯತಿಯನ್ನಾಗಿ ರೂಪಿಸುವ ಗುರಿಯನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಅನಕ್ಷರಸ್ಥರು ಕಲಿಕಾ ಕೇಂದ್ರಕ್ಕೆ ಹಾಜರಾಗಿ ಅಕ್ಷರ ಜ್ಞಾನವನ್ನು ಹೊಂದಬೇಕೆಂದು ಮನವಿ ಮಾಡಿದರು.

ಗ್ರಾ.ಪಂ. ಅಧ್ಯಕ್ಷ ನಾಗರಾಜು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಸದಸ್ಯ ಭೋಜಣ್ಣ, ವಯಸ್ಕರ ಶಿಕ್ಷಣಾಧಿಕಾರಿ ಬಾಲಾಜಿ, ನರಸಿಂಹಮೂರ್ತಿ, ಶಿವರುದ್ರಯ್ಯ, ಸೋಮಶೇಖರ್, ಕುಮಾರ್, ಎಂ.ಕೃಷ್ಣಯ್ಯ, ಚಂದ್ರಶೇಖರಗೌಡ, ರಾಜಣ್ಣ, ಗಂಗಾಧರಪ್ಪ, ರಂಗಲಕ್ಷ್ಮಿ, ಮತ್ತಿತರರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?