ಜಸ್ಟ್ ನ್ಯೂಸ್

ಸಿ.ಎಲ್.ಪಿ ನಾಯಕ ಸ್ಥಾನ ತ್ಯಜಿಸುವುದಾಗಿ ಸಿದ್ದರಾಮಯ್ಯ ಪತ್ರ

ಪಬ್ಲಿಕ್ ಸ್ಟೋರಿ: 15 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಸಿಗದ ಕಾರಣ ನೈತಿಕ ಹೊಣೆ ಹೊತ್ತು ಸಿ.ಎಲ್.ಪಿ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ಲೆಜೆಸ್ಲೆಟಿವ್ ಪಾರ್ಟಿ(ಸಿ.ಎಲ್.ಪಿ)ನಾಯಕ ಸ್ಥಾನ ನೀಡಿದ್ದಕ್ಕೆ ತಮಗೆ ಕೃತಜ್ಞತೆಗಳು. ಪ್ರಾಮಾಣಿಕವಾಗಿ ಶ್ರಮಿಸಿದಾಗ್ಯೂ ಚುನಾವಣೆಯಲ್ಲಿ  ತೃಪ್ತಿಕರ ಫಲಿತಾಂಶ ಸಿಕ್ಕಿಲ್ಲ ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿ.ಎಲ್.ಪಿ ನಾಯಕತ್ವದಿಂದ ಹಿಂದೆ ಸರಿಯುವ ಅನಿವಾರ್ಯತೆ ಇದೆ.

ತಮಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸದಾ ನಿಷ್ಠೆಯಿಂದಿರುತ್ತೇನೆ ಎಂದು   ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Comment here