Tuesday, July 23, 2024
Google search engine
Homeತುಮಕೂರು ಲೈವ್ಸುಗ್ಗಿ-ಹುಗ್ಗಿ: ಸಚಿವ ಮಾಧುಸ್ವಾಮಿ ಸಂತಸ

ಸುಗ್ಗಿ-ಹುಗ್ಗಿ: ಸಚಿವ ಮಾಧುಸ್ವಾಮಿ ಸಂತಸ

Tumukuru: ಹಿಂದಿನ ಕಾಲದಲ್ಲಿ ರೈತರು ತಾವು ಬೆಳೆದ ಬೆಳೆಯನ್ನು ಹೊಲದಿಂದ ಮನೆಗೆ ತರುವಾಗ ಸುಗ್ಗಿ ಹಬ್ಬವೆಂದು ಸಂಭ್ರಮಿಸುತ್ತಿದ್ದರು. ಆದರೆ ಈಗಿನ ಧಾವಂತ ಜೀವನದಲ್ಲಿ ಯಾಂತ್ರೀಕೃತ ಬದುಕಾಗಿದ್ದು ಸುಗ್ಗಿ ಹಬ್ಬವನ್ನು ಆಚರಿಸುವುದನ್ನು ಬಿಡುತ್ತಿದ್ದಾರೆ. ಇದನ್ನು ಮನಗಂಡ ಸರ್ಕಾರ ಸುಗ್ಗಿ-ಹುಗ್ಗಿ ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಕನ್ನಡ ಸಂಸ್ಕತಿ ಇಲಾಖೆಯಿಂದ ಅನುಷ್ಠಾನಗೊಳಿಸಿ ಅರ್ಥಪೂರ್ಣ ಆಚರಣೆಗೆ ಚಾಲನೆ ನೀಡಿದಂತಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಚಿಕ್ಕನಾಯಕನಹಳ್ಳಿಯ ಅಣೆಕಟ್ಟೆ ಸರ್ಕಾರಿ ಶಾಲಾ ಮೈದಾನದಲ್ಲಿ ಜ. 25ರಂದು ಏರ್ಪಡಿಸಿದ್ದ ಸುಗ್ಗಿ-ಹುಗ್ಗಿ ಸಿರಿಧಾನ್ಯಗಳೊಂದಿಗೆ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಜಾನಪದ ಕಲಾತಂಡಗಳ ಮೆರವಣಿಗೆಯನ್ನು ನಡೆಯಿತು. ತಹಶೀಲ್ದಾರ್ ತೇಜಸ್ವಿನಿ ಮತ್ತು ಹಿರಿಯ ಸಹಾಯಕ ಕೃಷಿ ನಿರ್ದೇಶಕ ಹನುಮಂತರಾಜು ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಪಟ ಕುಣಿತ, ವೀರಗಾಸೆ, ಚಕ್ಕ ಭಜನೆ, ಪೂಜಾ ಕುಣಿತ, ತಮಟೆ, ಕೊಂಬುಕಹಳೆ, ಡೊಳ್ಳು ಕುಣಿತ, ಕಂಸಾಳೆ, ನಂದಿಧ್ವಜ ಕುಣಿತ, ನಾಸಿಕ್‍ಡೋಲು, ಲಂಬಾಣಿ ನೃತ್ಯ ಮತ್ತು ಸೋಮನ ಕುಣಿತ ಕಲಾವಿದರು ಭಾಗವಹಿಸಿ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶನ ಮಾಡಿದರು.

ವೇದಿಕೆಯ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ಜಾನಪದ ಗೀತ ಗಾಯನ, ನೃತ್ಯರೂಪಕ, ನೀಲಗಾರರ ಪದಗಳು, ತೊಗಲುಗೊಂಬೆ ಕಾರ್ಯಕ್ರಮ ಪ್ರದರ್ಶನಗೊಂಡವು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿದೇಶಕ ಬಸವರಾಜಪ್ಪ ಆಪಿನಕಟ್ಟೆ, ತಾಲ್ಲೂಕು ಕನ್ನಡ ಜಾನಪದ ಪರಿಷತ್ ಕಾರ್ಯದರ್ಶಿ ಸಿ.ರವಿಕುಮಾರ್, ಎ.ಜಿ.ಸಿದ್ಧಲಿಂಗಸ್ವಾಮಿ ಮತ್ತು ಎ.ಆರ್.ಪ್ರವೀಣ್, ಇವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?