Thursday, March 28, 2024
Google search engine
Homeತುಮಕೂರು ಲೈವ್ಟೋಪಿ ಇಟ್ಟುಕೊಂಡ ಮಾತ್ರಕ್ಕೆ ಗಾಂಧೀಜಿ ಆಗಲು ಸಾಧ್ಯವಿಲ್ಲ

ಟೋಪಿ ಇಟ್ಟುಕೊಂಡ ಮಾತ್ರಕ್ಕೆ ಗಾಂಧೀಜಿ ಆಗಲು ಸಾಧ್ಯವಿಲ್ಲ

Publicstory. in


Tumkur; ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿದ ಸಿ.ಟಿ.ರವಿ, ಟೋಪಿ ಇಟ್ಟುಕೊಂಡ ಮಾತ್ರಕ್ಕೆ ಗಾಂಧೀಜಿ ಆಗಲು ಸಾಧ್ಯವಿಲ್ಲ ಎಂದರು.

ನೃತ್ಯ ಮತ್ತು ಸಂಗೀತ ಮನೋವಿಕಾಸದ ದೃಷ್ಠಿಯಿಂದ ಆರಂಭವಾಯಿತೇ ಹೊರತು ಕೇವಲ ಮನರಂಜನೆಯ ಉದ್ದೇಶಕ್ಕಾಗಿ ಆರಂಭವಾಗಲಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ತಿಳಿಸಿದರು.

ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಾಸ್ತ್ರೀಯ ನೃತ್ಯಕಲಾ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲೆಯ ಕ್ಷೇತ್ರವನ್ನು ಶುದ್ಧಗೊಳಿಸುವ ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಸಂಸ್ಕಾರ ಭಾರತಿ ಕೆಲಸ ಮಾಡುತ್ತಿದೆ ಎಂದರು.

ಕಲೆಗೆ ಅಂಟಿಕೊಂಡಿರುವ ಕತ್ತಲೆ ದೂರಮಾಡುತ್ತಾ ಸಾಗುತ್ತಿದೆ. ಸಂಗೀತ ಮನಸ್ಸನ್ನು ಮುದಗೊಳಿಸುವ ಕಾರ್ಯವನ್ನು ಮಾಡುತ್ತದೆ. ಸರ್ಕಾರ ಉತ್ತಮ ಶಿಕ್ಷಣ ನೀಡಿ, ಹೊಸ ಅನ್ವೇಷಣೆ ಮಾಡಲು ಸಹಕಾರಿಯಾಗಿದೆ. ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾರಭರಣ ಮಾತನಾಡಿ, ಕಲೆ ಮತ್ತು ಕಲಾವಿದರನ್ನು ಅರ್ಥ ಮಾಡಿಕೊಂಡರೆ ಸಮಾಜ ಕಟ್ಟುವಲ್ಲಿ ಕಲೆ ಹಾಗೂ ಕಲಾವಿದನ ಕರ್ತವ್ಯ ಏನೆಂಬುದು ಅರ್ಥ ಆಗುತ್ತದೆ. ಕಲೆ ಪ್ರತಿಯೊಬ್ಬರ ಮನಸ್ಸನ್ನು ಹದಗೊಳಿಸುವ ಕೆಲಸ ಮಾಡುತ್ತಿದೆ. ಕಲಾವಿದನು ಪ್ರೀತಿಯ ಮೂಲಕ ಕಲೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.

ಆರೋಗ್ಯ ಸಮಾಜ ನಿರ್ಮಾಣಕ್ಕೆ ಕಲಾವಿದನ ಪಾತ್ರ ಬಹುದೊಡ್ಡದು. ಅದರತ್ತ ನಾವೆಲ್ಲಾರೂ ಸಾಗಬೇಕಾಗಿದೆ. ಶಿಕ್ಷಣದಲ್ಲಿ ಆಗುತ್ತಿರುವ ವ್ಯತ್ಯಾಸ ಸಮಾಜ ಯಾವ ಕಡೆ ಸಾಗುತ್ತಿದೆ ಎಂಬುದರ ಅರಿವು ನಮಗೆ ಬರುತ್ತದೆ. ಮನಸ್ಸನ್ನು ಮುದಗೊಳಿಸುವ ಗುರು ಶಿಷ್ಯರ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಕೆಲಸವಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಭರತ ನಾಟ್ಯ ಕಲಾವಿದೆ ಪದ್ಮಶ್ರೀ ಡಾ. ಚಿತ್ರಾ ವಿಶ್ವೇಶ್ವರನ್, ಚಲನಚಿತ್ರ ನಟಿ ಮಾಳವಿಕ ಅವಿನಾಶ್, ಪ್ರಾಂತ ಶಾಸ್ತ್ರೀಯ ನೃತ್ಯೋತ್ಸವ ಅಧ್ಯಕ್ಷ ಎಚ್.ಪಿ. ಚಂದ್ರಶೇಖರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?